ಮಂಗಳೂರು ಪಬ್ ದಾಳಿ: ಆರೋಪಿಗಳು ಖುಲಾಸೆಗೊಳ್ಳಲು ಕಾರಣಗಳು
ಮಂಗಳೂ, ಮಾರ್ಚ್ 17: ಮಂಗಳೂರಿನ ಬಲ್ಮಠ ರಸ್ತೆಯ ಅಮ್ನೇಸಿಯಾ ಪಬ್ ದಾಳಿ ಆರೋಪಿಗಳು ಖುಲಾಸೆಗೊಳ್ಳಲು ಪ್ರಾಸಿಕೂಷನ್ ಹಾಗೂ ತನಿಕೆಯಲ್ಲಿನ ಬೇಜವಬ್ದಾರಿ ತನವೇ ಕಾರಣ ಎಂದು ಎಲ್ಲಡೆಯಿಂದ ಟೀಕೆಗಳು ವ್ಯಕ್ತವಾಗಿದ್ದು, ಕೂಡಲೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕು ಎಂದು ಒತ್ತಾಯ ಸಹ ವ್ಯಕ್ತವಾಗುತ್ತಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಅಂದು ನಡೆದ ಘಟನೆಯ ವಿಡಿಯೋ ತುಣುಕುಗಳು, ಛಾಯಾಚಿತ್ರಗಳು ಮತ್ತು ಹಲ್ಲೆಗೆ ಒಳಗಾದ ಮಹಿಳೆಯರನ್ನು ಸಾಕ್ಷ್ಯವಾಗಿ ಹಾಜರುಪಡಿಸದೇ ಇರುವುದೇ ಆರೋಪಿಗಳು ಖುಲಾಸೆಗೊಳ್ಳಲು ಕಾರಣ. ತೀರ್ಪಿನಲ್ಲಿ ಸಹ 'ತನಿಖೆ ಮತ್ತು ವಿಚಾರಣೆಯ ಎಲ್ಲ ಹಂತಗಳಲ್ಲಿ ಪ್ರಾಸಿಕ್ಯೂಷನ್ ಆರೋಪ ಸಾಬೀತು ಮಾಡಲು ಸಂಪೂರ್ಣ ವಿಫಲವಾಗಿವೆ' ಎಂದು ಉಲ್ಲೇಖಿಸಲಾಗಿರುವುದು ಗಮನಾರ್ಹ.
ತನಿಖಾ ಲೋಪ ಹಾಗೂ ಆರೋಪಿಗಳು ಖುಲಾಸೆಗೊಳ್ಳಲು ಕಾರಣಗಳನ್ನು ತಿಳಿದುಕೊಳ್ಳಲು ತ್ವರಿತವಾಗಿ ವರದಿ ನೀಡುವಂತೆ ಕಮಿಷನರ್ ಟಿ.ಆರ್.ಪ್ರಕಾಶ್ ಅವರು ಪ್ರಾಸಿಕೂಷನ್ಗೆ ಪತ್ರ ಬರೆದಿದ್ದು, ವರದಿ ಬಂದ ನಂತರ ಮುಂದಿನ ನಡೆಯ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದಿದ್ದಾರೆ.

ಘಟನೆ ಕುರಿತ ಹಲವು ವಿಡಿಯೋಗಳು, ಛಾಯಾಚಿತ್ರಗಳು ಲಬ್ಯವಿದ್ದರೂ ಸಹ ನ್ಯಾಯಾಲಯಕ್ಕೆ ಸಾಕ್ಷಿಯಾಗಿ ನೀಡಿರಲೇ ಇಲ್ಲ, ಅಲ್ಲದೆ ಪಬ್ ಮಾಲೀಕ ಹಾಗೂ ಪ್ರತ್ಯಕ್ಷ ದರ್ಶಿಗಳೂ ಸಹಮ ನ್ಯಾಯಾಲಯದಲ್ಲಿ ವ್ಯತಿರಿಕ್ತ ಹೇಳಿಕೆ ನೀಡಿದ ಕಾರಣ ಆರೋಪಿಗಳ ಅಪರಾಧ ಸಾಬೀತಾಗಲಿಲ್ಲ.
ಪೊಲೀಸರು ಹೊರತುಪಡಿಸಿದರೆ ದೂರುದಾರರು, ಸಂತ್ರಸ್ಥರು, ಪ್ರತ್ಯಕ್ಷದರ್ಶಿಗಳು ಯಾರೊಬ್ಬರೂ ಸಹ ಆರೋಪಿಗಳನ್ನು ಹಾಗೂ ಸಂಘಟನೆಯನ್ನು ಗುರುತಿಸಲಿಲ್ಲ ಎಂಬುದು ಪ್ರಾಸಿಕ್ಯೂಷನ್ನ ಬಹು ಮುಖ್ಯ ಹಿನ್ನಡೆಯಾಯಿತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications