ಗೋವುಗಳನ್ನು ಕಟುಕರ ಕೈಗೆ ಕೊಡಬೇಡಿ
ಮಂಗಳೂರು, ಡಿ.16 : ಗೋವುಗಳ ಸಂತತಿಯ ಸಂರಕ್ಷಣೆಗಾಗಿ ಗೋಹತ್ಯೆ ನಿಷೇಧ ಜಾರಿಗೊಳಿಸಿ ಗೋ ಸಂಪತ್ತನ್ನು ಉಳಿಸಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಗೋ ರಥದೊಂದಿಗೆ ಮಂಗಳೂರಿನಲ್ಲಿ ಕಾಲ್ನಡಿಗೆ ಜಾಥಾ ನಡೆಸಿತು. ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಾಲ್ಕು ಪಂಥದ ಸಾಧು ಸಂತರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಶ್ರೀರಾಮ ಸೇನೆ ಘಟಕ ಮಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಗೋ ರಥದೊಂದಿಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಸಿತು. ಗೋವು ನಮ್ಮ ಶ್ರದ್ಧಾ ಭಕ್ತಿಯ ಪ್ರತೀಕ. ಅದರ ಹತ್ಯೆ ನಿಲ್ಲಿಸಲು ಪ್ರಾಣಿ ದಯಾ ಸಂಘ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು. [ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ]

ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಸಭೆಯಲ್ಲಿ ಮಾತನಾಡಿದ ಶ್ರೀರಾಮ ಸೇನೆಯ ದಕ್ಷಿಣ ಪ್ರಾಂತದ ಅಧ್ಯಕ್ಷ ಮಹೇಶ್ ಕೊಪ್ಪ ಅವರು, ಗೋರಕ್ಷಣೆ, ಭಯೋತ್ಪಾದನೆ ಹತ್ತಿಕ್ಕಲು, ಮತಾಂತರ ನಿಲ್ಲಿಸಲು ಶ್ರೀರಾಮ ಸೇನೆಯು ದೇಶದ 12 ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತದೆ ಎಂದರು.[ರಾಯಚೂರು ಗೋ ಶಾಲೆಯಲ್ಲಿ ಹಸುಗಳ ಸಾವು]
ಭಾರತೀಯ ಗೋವಿನ ವರ್ಣನೆ ಊಹೆಗೂ ನಿಲುಕದ್ದು, ಗೋವಿಗೆ ರಾಜಕೀಯ, ಜಾತಿ, ಧರ್ಮ ಗೊತ್ತಿಲ್ಲ. ಗೋವನ್ನು ನಾವು ಹೇಗೆ ರಕ್ಷಿಸುತ್ತೇವೆಯೋ ಹಾಗೆ ನಮ್ಮನ್ನು ಅದು ಕಾಪಾಡುತ್ತದೆ. ಗೋವಿನ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು. [ಚಿತ್ರಗಳು : ಐಸಾಕ್ ರಿಚರ್ಡ್, ಮಂಗಳೂರು]

ಗೋರಕ್ಷಣೆಗೆ ಆಗ್ರಹಿಸಿದ ಬೇಡಿಕೆ ಹಾಗೂ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಯಿತು. ಶ್ರೀರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ವಾಲ್ಕೆ, ಜಿಲ್ಲಾಧ್ಯಕ್ಷ ಜೀವನ್ ನೀರುಮಾರ್ಗ, ಪ್ರಾಂತ ಉಪಾಧ್ಯಕ್ಷ ಕುಮಾರ್ ಮಾಲೆಮಾರ್ ಮುಂತಾದವರು ಪಾಲ್ಗೊಂಡಿದ್ದರು.

ಭಾಗವಹಿಸಿದ ಸಾಧುಗಳು : ಹರಿದ್ವಾರದ ಪಂಚಾಯತ್ ನಿರಂಜನ್ ಅಖಾಡಾದ ಶ್ರೀ ಸ್ವಾಮಿ ನಾರಾಯಣ ಗಿರಿ, ಉತ್ತರ ಪ್ರದೇಶದ ಕಾಶಿಯ ಶ್ರೀ ರಾಮದಾಸ್ ಸ್ವಾಮಿ, ಕಾಶಿ ಶಂಕರಾಚಾರ್ಯ ಮಠದ ಶ್ರೀ ಓಂಕಾರ ಸ್ವಾಮಿ, ಮಹಾರಾಷ್ಟ್ರದ ಶ್ರೀ ಪ್ರಕಾಶ್ ಜಾಧವ್ ಸ್ವಾಮಿ ಮುಂತಾದವರು ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications