ಗೋವುಗಳನ್ನು ಕಟುಕರ ಕೈಗೆ ಕೊಡಬೇಡಿ
ಮಂಗಳೂರು, ಡಿ.16 : ಗೋವುಗಳ ಸಂತತಿಯ ಸಂರಕ್ಷಣೆಗಾಗಿ ಗೋಹತ್ಯೆ ನಿಷೇಧ ಜಾರಿಗೊಳಿಸಿ ಗೋ ಸಂಪತ್ತನ್ನು ಉಳಿಸಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಗೋ ರಥದೊಂದಿಗೆ ಮಂಗಳೂರಿನಲ್ಲಿ ಕಾಲ್ನಡಿಗೆ ಜಾಥಾ ನಡೆಸಿತು. ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಾಲ್ಕು ಪಂಥದ ಸಾಧು ಸಂತರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಶ್ರೀರಾಮ ಸೇನೆ ಘಟಕ ಮಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಗೋ ರಥದೊಂದಿಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಸಿತು. ಗೋವು ನಮ್ಮ ಶ್ರದ್ಧಾ ಭಕ್ತಿಯ ಪ್ರತೀಕ. ಅದರ ಹತ್ಯೆ ನಿಲ್ಲಿಸಲು ಪ್ರಾಣಿ ದಯಾ ಸಂಘ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು. [ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ]

ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಸಭೆಯಲ್ಲಿ ಮಾತನಾಡಿದ ಶ್ರೀರಾಮ ಸೇನೆಯ ದಕ್ಷಿಣ ಪ್ರಾಂತದ ಅಧ್ಯಕ್ಷ ಮಹೇಶ್ ಕೊಪ್ಪ ಅವರು, ಗೋರಕ್ಷಣೆ, ಭಯೋತ್ಪಾದನೆ ಹತ್ತಿಕ್ಕಲು, ಮತಾಂತರ ನಿಲ್ಲಿಸಲು ಶ್ರೀರಾಮ ಸೇನೆಯು ದೇಶದ 12 ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತದೆ ಎಂದರು.[ರಾಯಚೂರು ಗೋ ಶಾಲೆಯಲ್ಲಿ ಹಸುಗಳ ಸಾವು]
ಭಾರತೀಯ ಗೋವಿನ ವರ್ಣನೆ ಊಹೆಗೂ ನಿಲುಕದ್ದು, ಗೋವಿಗೆ ರಾಜಕೀಯ, ಜಾತಿ, ಧರ್ಮ ಗೊತ್ತಿಲ್ಲ. ಗೋವನ್ನು ನಾವು ಹೇಗೆ ರಕ್ಷಿಸುತ್ತೇವೆಯೋ ಹಾಗೆ ನಮ್ಮನ್ನು ಅದು ಕಾಪಾಡುತ್ತದೆ. ಗೋವಿನ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು. [ಚಿತ್ರಗಳು : ಐಸಾಕ್ ರಿಚರ್ಡ್, ಮಂಗಳೂರು]

ಗೋರಕ್ಷಣೆಗೆ ಆಗ್ರಹಿಸಿದ ಬೇಡಿಕೆ ಹಾಗೂ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಯಿತು. ಶ್ರೀರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ವಾಲ್ಕೆ, ಜಿಲ್ಲಾಧ್ಯಕ್ಷ ಜೀವನ್ ನೀರುಮಾರ್ಗ, ಪ್ರಾಂತ ಉಪಾಧ್ಯಕ್ಷ ಕುಮಾರ್ ಮಾಲೆಮಾರ್ ಮುಂತಾದವರು ಪಾಲ್ಗೊಂಡಿದ್ದರು.

ಭಾಗವಹಿಸಿದ ಸಾಧುಗಳು : ಹರಿದ್ವಾರದ ಪಂಚಾಯತ್ ನಿರಂಜನ್ ಅಖಾಡಾದ ಶ್ರೀ ಸ್ವಾಮಿ ನಾರಾಯಣ ಗಿರಿ, ಉತ್ತರ ಪ್ರದೇಶದ ಕಾಶಿಯ ಶ್ರೀ ರಾಮದಾಸ್ ಸ್ವಾಮಿ, ಕಾಶಿ ಶಂಕರಾಚಾರ್ಯ ಮಠದ ಶ್ರೀ ಓಂಕಾರ ಸ್ವಾಮಿ, ಮಹಾರಾಷ್ಟ್ರದ ಶ್ರೀ ಪ್ರಕಾಶ್ ಜಾಧವ್ ಸ್ವಾಮಿ ಮುಂತಾದವರು ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದ್ದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications