ಮಂಗಳೂರು: ಸಾಮರಸ್ಯ ನಡಿಗೆಗೂ ಮುನ್ನ ಬಸ್ ಮೇಲೆ ಕಲ್ಲು ತೂರಾಟ
ಮಂಗಳೂರು, ಡಿಸೆಂಬರ್ 12: ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಬಿ.ರಮಾನಾಥ್ ರೈ ನೇತೃತ್ವದಲ್ಲಿ ಇಂದು ಮಂಗಳೂರಿನ ಫರಂಗಿಪೇಟೆಯಿಂದ ಮಾಣಿವರೆಗೆ ಸಾಮರಸ್ಯ ನಡಿಗೆ ಪಾದಯಾತ್ರೆ ನಡೆಯಲಿದೆ.
ಪಾದಯಾತ್ರೆ ಹಿನ್ನಲೆಯಲ್ಲಿ ಫರಂಗಿಪೇಟೆಯಲ್ಲಿ ದುಷ್ಕರ್ಮಿಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುವ ರಾಜಹಂಸ ಹಾಗೂ ಐರಾವತ ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು ಬಸ್ ಗಳ ಗಾಜು ಪುಡಿಯಾಗಿದೆ. ಘಟನೆಯಲ್ಲಿ ಯಾವುದೇ ಗಾಯಗಳಾಗದೆ ಪ್ರಯಾಣಿಕರು ಪಾರಾಗಿದ್ದಾರೆ.
ಫರಂಗಿಪೇಟೆಯಲ್ಲಿ ಬೆಳಿಗ್ಗೆ 9 ಗಂಟೆಗೆ ಸಾಮರಸ್ಯ ಪಾದಯಾತ್ರೆಗೆ ಚಾಲನೆ ದೊರಕಲಿದೆ. ಫರಂಗಿಪೇಟೆಯಿಂದ ಮಾಣಿಯವರೆಗೆ 'ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ' ಕಾಲ್ನಡಿಗೆ ಜಾಥಾ ನಡೆಯಲಿದೆ.

ಕಲ್ಲಡ್ಕ ಮಾರ್ಗವಾಗಿ ರೈ ನೇತೃತ್ವದ ನಡಿಗೆ ಸಾಗಲಿದ್ದು ನಡಿಗೆಯಲ್ಲಿ ನಟ ಪ್ರಕಾಶ್ ರೈ ,ಸೇರಿದಂತೆ ಸಿಪಿಐಎಂ ಮುಖಂಡರು ಭಾಗವಹಿಸಲಿದ್ದಾರೆ.

ಸಾಮರಸ್ಯ ನಡಿಗೆ ಹಿನ್ನೆಲೆಯಲ್ಲಿ ಫರಂಗಿಪೇಟೆಯಿಂದ ಮಾಣಿವರೆಗೆ 1000 ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications