ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು: ಕಟ್ಟಡದಿಂದ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

|
Google Oneindia Kannada News

ಮಂಗಳೂರು, ಜುಲೈ.26: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜುಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೃದಯಭಾಗದಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಜಪ್ಪಿನಮೊಗರು ನಿವಾಸಿ ಮೋಹನ್ ಎಂಬವರ ಪುತ್ರ ಗುರುಪ್ರಸಾದ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ . ಈತ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ.

ಮಂಡ್ಯ : ಪರೀಕ್ಷೆಯಲ್ಲಿ ಕಡಿಮೆ ಅಂಕ, ವಿದ್ಯಾರ್ಥಿನಿ ಆತ್ಮಹತ್ಯೆಮಂಡ್ಯ : ಪರೀಕ್ಷೆಯಲ್ಲಿ ಕಡಿಮೆ ಅಂಕ, ವಿದ್ಯಾರ್ಥಿನಿ ಆತ್ಮಹತ್ಯೆ

ನಿನ್ನೆ ಬುಧವಾರ ಎಂದಿನಂತೆ ತಂದೆ ಮೋಹನ್ ಮಗ ಗುರುಪ್ರಸಾದ್ ನನ್ನು ನಗರದ ಕಂಕನಾಡಿ ಬಸ್ ನಿಲ್ದಾಣದ ಬಳಿ ಬಿಟ್ಟು ತೆರಳಿದ್ದಾರೆ.

Mangaluru student committed suicide

ಗುರುಪ್ರಸಾದ್ ನೇರ ಕಾಲೇಜಿಗೆ ತೆರಳದೆ ಹಂಪನಕಟ್ಟದಲ್ಲಿ ಕುನಿಲ್ ಕಾಪ್ಲೆಕ್ಸ್ ತೆ ತೆರಳಿ ಸ್ವಲ್ಪ ಹೊತ್ತು ಅಲ್ಲಿ ಕಾಲಕಳೆದಿದ್ದಾನೆ. ನಂತರ ಕಟ್ಟಡದ 4 ನೇ ಮಹಡಿ ಗೆ ತೆರಳಿ ಅಲ್ಲಿಂದ ಕೆಳಕ್ಕೆ ಜಿಗಿದಿದ್ದಾನೆ. ನಾಲ್ಕನೆ ಮಹಡಿಯಿಂದ ಜಿಗಿದ ಗುರುಪ್ರಸಾದ್ ಗಂಭೀರವಾಗಿ ಗಾಯಗೊಂಡಿದ್ದು ಅತನನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುಪ್ರಸಾದ್ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಈ ಘಟನೆಯ ಕುರಿತು ನಗರದ ಬಂದರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

English summary
An engineering student committed suicide in Mnagluru. Deceaded student identified as Guruprasad (20) native of Jappinmogaru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X