ಲಂಚ ಕೇಳಿದ ಮಂಗಳೂರು ತಹಶಿಲ್ದಾರ್ಗೆ ನ್ಯಾಯಾಂಗ ಬಂಧನ
ಮಂಗಳೂರು, ಅಕ್ಟೋಬರ್ 1: ಲಂಚ ಸ್ವೀಕಾರದ ಆರೋಪದಲ್ಲಿ ಬಂಧನಕ್ಕೊಳಗಾದ ಮಂಗಳೂರು ತಹಶಿಲ್ದಾರ್ ಪುರಂದರ ಹೆಗ್ಡೆ ಹಾಗೂ ಆತನ ಸಹಾಯಕ ಶಿವಾನಂದ ನಾಟೇಕರ್ಗೆ ಜಾಮೀನು ನಿರಾಕರಿಸಿರುವ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಪೊಲೀಸರು ಮಂಗಳೂರು ಮಿನಿ ವಿಧಾನಸೌಧಕ್ಕೆ ದಾಳಿ ನಡೆಸಿ ಲಂಚ ಸ್ವೀಕಾರ ಮಾಡುತ್ತಿರುವಾಗಲೇ ತಹಶಿಲ್ದಾರ್ ಸಹಾಯಕ ಅಧಿಕಾರಿಯನ್ನು ಶುಕ್ರವಾರ ಬಂಧಿಸಿತ್ತು. ಶಿವಾನಂದ್ನನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಂತೆ ತಹಶೀಲ್ದಾರ್ ಪರವಾಗಿ ತಾನು ಲಂಚ ಪಡೆದಿದ್ದಾಗಿ ಬಾಯ್ದಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪುರಂದರ ಮತ್ತು ಶಿವಾನಂದ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಹಿರಿಯ ನಾಗರಿಕರೊಬ್ಬರು ತಮ್ಮ ಜಾಗ ಮಾರಾಟ ಮಾಡುವುದಕ್ಕಾಗಿ ಎನ್ಒಸಿ ಪಡೆಯಲು ಆಗಮಿಸಿದ ವೇಳೆ ಆರೋಪಿ ಶಿವಾನಂದ ನಾಟೆಕರ್ 2,000 ರೂ. ಲಂಚ ಪಡೆದು ಹೆಚ್ಚಿನ 10 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಬಳಿಕ ಅವರ ಮನವಿಯಂತೆ 5,000 ರೂ. ಗೆ ಒಪ್ಪಿಗೆ ಸೂಚಿಸಿದ್ದ. ಈ ಬಗ್ಗೆ ಹಿರಿಯ ನಾಗರಿಕರು ಲೋಕಾಯುಕ್ತಕ್ಕೆ ಮಾಹಿತಿ ನೀಡಿದ್ದರು. ಅದರಂತೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶಿವಾನಂದ ನಾಟೇಕರ್ ಲಂಚ ಸ್ವೀಕರಿಸುತ್ತಿರುವಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಆರೋಪಿ ಶಿವಾನಂದ್ ಮೂಲ್ಕಿಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸುತ್ತಿದ್ದ.ಈತ ಈ ಹಿಂದೆ ಕೂಡಾ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದು ಅಮಾನತುಗೊಂಡಿದ್ದ. 9 ತಿಂಗಳ ಹಿಂದೆಯಷ್ಟೇ ಈತನಿಗೆ ಪದೋನ್ನತಿಯಾಗಿದ್ದು, ಬಳಿಕ ಮಂಗಳೂರು ಮಿನಿ ವಿಧಾನ ಸೌಧದದಲ್ಲಿ ತಹಸೀಲ್ದಾರ್ ಸಹಾಯಕನಾಗಿ ನಿಯೋಜನೆಗೊಂಡಿದ್ದ. ತಹಸೀಲ್ದಾರ್ ಪುರಂದರ್ ಬಂಟ್ವಾಳ, ಕಾರ್ಕಳದಲ್ಲಿ ಕರ್ತವ್ಯ ನಿರ್ವಹಿಸಿ 3 ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದರು. ಮಿನಿ ವಿಧಾನಸೌಧದಲ್ಲಿ ಲಂಚಾವತಾರದ ಬಗ್ಗೆ ಪದೇ ಪದೇ ದೂರುಗಳು ಬರುತ್ತಿದ್ದು, ಈಗ ಆರೋಪಿಗಳಿಬ್ಬರು ರೆಡ್ ಹ್ಯಾಂಡ್ ಸಿಕ್ಕಿರುವುದು ಆಪಾದನೆಗಳಿಗೆ ಪುಷ್ಠಿ ಸಿಕ್ಕಂತಾಗಿದೆ.
ಲೋಕಾಯುಕ್ತ ಎಸ್ಪಿ ಲಕ್ಷ್ಮೀಗಣೇಶ್ ಮಾರ್ಗದರ್ಶನ ದಂತೆ ಡಿವೈಎಸ್ಪಿ ಕಲಾವತಿ ಮತ್ತು ಚೆಲುವರಾಜ, ಇನ್ಸ್ಪೆಕ್ಟರ್ಗಳಾದ ಅಮಾನುಲ್ಲಾ ಎ.ಜಯರಾಮ ಡಿ.ಗೌಡ ಮತ್ತು ಸಿಬ್ಬಂದಿ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications