Mangaluru-Ayodhya Special Train: ಮಂಗಳೂರಿನಿಂದ ಅಯೋಧ್ಯೆಗೆ ವಿ‍ಶೇಷ ರೈಲು-ಸಮಯ, ದರಗಳ ಮಾಹಿತಿ

ಮಂಗಳೂರು, ಫೆಬ್ರವರಿ, 08: ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯಮತ್ತೂರು-ದರ್ಶನ ನಗರ್‌-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆಬ್ರವರಿ 8ರಂದು ಹೊರಡಲಿದ್ದು, ಮಂಗಳೂರು ಜಂಕ್ಷನ್‌ ನಿಲ್ದಾಣದ ಮೂಲಕ ಅಯೋಧ್ಯೆಗೆ ತೆರಳಲಿದೆ.

ಇಂದು (ಫೆಬ್ರವರಿ 8) ಸಂಜೆ 5:50ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿ, 6ಕ್ಕೆ ತೆರಳುವ ಈ ರೈಲು ಫೆಬ್ರವರಿ ಫೆಬ್ರವರಿ 11ರ ಬೆಳಗ್ಗೆ ಆಯೋಧ್ಯೆಗೆ ದರ್ಶನ್‌ನಗರ ನಿಲ್ದಾಣ ತಲುಪಲಿದೆ. ಮತ್ತೆ ಫೆಬ್ರವರಿ 12ರಂದು ಬೆಳಗ್ಗೆ 8ಕ್ಕೆ ಅಯೋಧ್ಯೆಯಿಂದ ಹೊರಟು ಫೆಬ್ರವರಿ 14ರ ಸಂಜೆ ಮಂಗಳೂರು ಜಂಕ್ಷನ್‌ ತಲುಪಲಿದೆ.

Mangaluru to Ayodhya Special Train, know Timings, Fares details

ಪರೀಕ್ಷಾರ್ಥ ರೈಲು ಸಂಚಾರ ಯಶಸ್ವಿ: ಕಾರಟಗಿ ರೈಲು ನಿಲ್ದಾಣದಿಂದ ರಾಯಚೂರು ಜಿಲ್ಲೆಯ ಈ ಮಾರ್ಗದಲ್ಲಿ ರೈಲು ಸಂಚಾರ ಯಶಸ್ವಿಯಾಗಿದೆ. ಹಾಗಾದರೆ ಯಾವ ಮಾರ್ಗದಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ

ಕಾರಟಗಿ ರೈಲು ನಿಲ್ದಾಣದಿಂದ ಸಿಂಧನೂರು ನಗರದ ರೈಲು ನಿಲ್ದಾಣದವರೆಗೆ ಪರೀಕ್ಷಾರ್ಥ ರೈಲು ಸಂಚಾರವು ಯಶಸ್ವಿಯಾಗಿದೆ. ಅಂದಾಜು 130 ಕಿ.ಮೀ.ವೇಗದಲ್ಲಿ 3 ಬೋಗಿಗಳನ್ನು ಹೊಂದಿದ್ದ ರೈಲ್ವೆ ಎಂಜಿನ್‌ ಅನ್ನು ಕಾರಟಗಿಯಿಂದ ಸಿಂಧನೂರುವರೆಗೆ ಎರಡು ಭಾರಿ ಪರೀಕ್ಷಾರ್ಥ ಸಂಚಾರ ನಡೆಸಲಾಯಿತು. ಈ ವೇಳೆ ರೈಲ್ವೆ ಇಲಾಖೆ ಅಧಿಕಾರಿಗಳು, ಟ್ರ್ಯಾಕ್‌ ಅಧಿಕಾರಿಗಳು ಕಾಮಗಾರಿಗಳ ಭದ್ರತೆಯನ್ನು ಪರಿಶೀಲನೆ ಮಾಡಿದರು.

ಅಲ್ಲದೆ ಕಾರಟಗಿ-ಸಿಂಧನೂರು ನಡುವಿನ ರೈಲ್ವೆ ನಿಲುಗಡೆಗೆ ಕೈಗೊಂಡಿರುವ ಕಾಮಗಾರಿಗಳನ್ನು ಕೂಡ ಪರಿಶೀಲಿಸಿದರು. ಸುಮಾರು 14 ಕಿಲೋ ಮೀಟರ್‌ ಸಂಚಾರ ನಡೆಸುವ ಮೂಲಕ ಸಣ್ಣಪುಟ್ಟ ಲೋಪದೋಷಗಳನ್ನು ತಿಳಿದುಕೊಂಡರು. ಅಷ್ಟೇ ಅಲ್ಲದೆ ಸೇತುವೆ ಮೇಲೆ ಸಂಚಾರ ಮತ್ತಿತರ ಅಂಶಗಳನ್ನು ಅಧಿಕಾರಿಗಳು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದರು.

ಈ ವೇಳೆ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳಾದ ಉಮಾಮಹೇಶ್ವರ, ರಾಮಾಶ್ರಮಜಾ ಹಾಗೂ ಸಿಬ್ಬಂದಿ, ಕಾರ್ಮಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+