ಮಂಗಳೂರು ಟೌನ್ಹಾಲ್ ನವೀಕರಣ ಮುಗಿಯುವುದೆಂದು?
ಮಂಗಳೂರು, ನವೆಂಬರ್ 02 : ಮಂಗಳೂರು ಪುರಭವನದ ನವೀಕರಣ ಕಾರ್ಯ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ನ.14ಕ್ಕೆ ಎಲ್ಲಾ ಕೆಲಸ ಮುಗಿಯಲಿದೆ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ, ಈಗ ಕಾಮಗಾರಿ ನಡೆಯುತ್ತಿರುವ 'ವೇಗ' ನೋಡಿದರೆ ನವೆಂಬರ್ 30ಕ್ಕೂ ಕೆಲಸಗಳು ಮುಗಿಯುವುದು ಅನುಮಾನ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮೇಯರ್ ಜೆಸಿಂತಾ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮುಂತಾದವರು ಹಲವು ಬಾರಿ ಪುರಭವನದ ನವೀಕರಣ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಬೇಗ ಮುಗಿಯುತ್ತದೆ ಎಂದು ಭರವಸೆ ನೀಡಿದ್ದಾರೆ. [ಮಂಗಳೂರು : ಪುರಭವನದ ನವೀಕರಣ ಮುಗಿಯುತ್ತಿಲ್ಲ]

ಸದ್ಯ, ನವೆಂಬರ್ 14ಕ್ಕೆ ನವೀಕರಣಗೊಂಡ ಪುರಭವನದ ಉದ್ಘಾಟನೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಘೋಷಿಸಿದ್ದರು. ಆದರೆ, ಪುರಭವನದಲ್ಲಿ ಕುರ್ಚಿ ಜೋಡಿಸುವ ಕೆಲಸವೇ ಇನ್ನೂ ಮುಗಿದಿಲ್ಲ. 900 ಆಸನಗಳನ್ನು ಜೋಡಿಸಲು 15 ದಿನ ಸಾಲದು ಎನ್ನುತ್ತಾರೆ ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳುತ್ತಿರುವವರು. ಹಾಗಾದರೆ ನವೆಂಬರ್ 14ರ ಮಕ್ಕಳ ದಿನಾಚರಣೆಯಂದು ಪುರಭವನ ಉದ್ಘಾಟನೆಯಾಗಲಿದೆಯೇ? ಕಾದು ನೋಡಬೇಕು.
ಹೆಚ್ಚಳವಾಗಲಿದೆ ಟೌನ್ಹಾಲ್ ಬಾಡಿಗೆ : ನವೀಕರಣಗೊಂಡ ಟೌನ್ಹಾಲ್ ಬಾಡಿಗೆ ಹೆಚ್ಚಳವಾಗಲಿದೆ. ಬಾಡಿಗೆಯನ್ನು ಎಷ್ಟು ಹೆಚ್ಚಿಸಬೇಕು ಎಂಬ ಕುರಿತು 2 ಸಭೆಗಳು ನಡೆದಿವೆ. ಆದರೆ, ಅಂತಿಮ ನಿರ್ಧಾರವನ್ನು ಇನ್ನೂ ಕೈಗೊಂಡಿಲ್ಲ. ನವೀಕರಣದ ಲೆಕ್ಕಾಚಾರ ನೋಡಿದಾಗ ಬಾಡಿಗೆ ಈಗಿರುವುದಕ್ಕಿಂತ 3 ರಿಂದ 4 ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ.[ನವೀಕರಣಗೊಂಡ ಬೆಂಗಳೂರು ಟೌನ್ ಹಾಲ್ ಚಿತ್ರಗಳು]
ಹಿಂದೆ ಟೌನ್ಹಾಲ್ ನವೀಕರಣಕ್ಕೆ 2 ಕೋಟಿ ಖರ್ಚಾಗಬಹುದು ಎಂದು ಯೋಜನೆ ರೂಪಿಸಲಾಗಿತ್ತು. ಆದರೆ, ಈಗ ಅದು 4.5 ಕೋಟಿಗೆ ತಲುಪಿದೆ. ಸಂಪೂರ್ಣ ಹವಾನಿಯಂತ್ರಿತವಾದ ಭವನದಲ್ಲಿ ನಾಟಕ , ಸಂಗೀತ ಕಾರ್ಯಕ್ರಮಗಳಿಗಾಗಿ ಮುಂಬೈ ಮಾದರಿಯ ಆಧುನಿಕ ತಾಂತ್ರಿಕತೆಯನ್ನು ಅಳವಡಿಸಲಾಗಿದೆ. ಈ ಬದಲಾವಣೆಗಳಿಗೆ ತಕ್ಕಂತೆ ಬಾಡಿಗೆ ನಿಗದಿಪಡಿಸಿದರೆ ಪುರಭವನದಲ್ಲಿ ನಾಟಕಗಳೇ ನಡೆಯುವುದಿಲ್ಲ ಎನ್ನುತಾತೆ ಜನರು.
ಹಿಂದೆ ದೇವಣ್ಣ ಶೆಟ್ಟಿ ಅವರು ಮೇಯರ್ ಆಗಿದ್ದ ಕಾಲದಲ್ಲಿ ಪುರಭವನ ನವೀಕರಣಗೊಂಡಿತ್ತು. ಆಗಲು ಬಾಡಿಗೆ ಹೆಚಿಸಲಾಗಿತ್ತು. ಆಗಿನ ಬಾಡಿಗೆಯನ್ನು ವಿರೋಧಿಸಿ ಕಲಾವಿದರು ಹೋರಾಟ ನಡೆಸಿದ್ದರು. ಬಳಿಕ ಬಾಡಿಗೆ ಸ್ವಲ್ಪ ಇಳಿಕೆ ಮಾಡಲಾಗಿತ್ತು.
ಸದ್ಯ, ಬಾಡಿಗೆ ನಿಗದಿ ಕುರಿತು ಸಾಲು-ಸಾಲು ಸಭೆ ನಡೆಯುತ್ತಿರುವುದು ನೋಡಿದರೆ ಕಲಾವಿದರು ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧವಾಗಬೇಕೋ ಎಂದು ಅನ್ನಿಸುತ್ತಿದೆ. ಪುರಭವನ ಎಂದು ಬಾಗಿಲು ತೆರೆಯುತ್ತೇ? ಎಂದು ಸಾಂಸ್ಕೃತಿಕ ಕಾರ್ಯಕ್ರಮದ ಆಯೋಜಕರು ಕಾದು ಕುಳಿತಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications