ಸೈನಿಕರ ವಿರುದ್ಧದ ಪಠ್ಯಕ್ಕೆ ಕತ್ತರಿ: ಮಂಗಳೂರು ವಿವಿ ನಿರ್ಧಾರ
ಭಾರೀ ವಿವಾದಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಯುದ್ಧ ಒಂದು ಉದ್ಯಮ ಲೇಖನವನ್ನು ಪಠ್ಯಕ್ರಮದಿಂದ ತೆಗೆದ ಹಾಕಲು ಮಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ .
ಮಂಗಳೂರು, ಆಗಸ್ಟ್ 14: ಭಾರೀ ವಿವಾದಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಯುದ್ಧ ಒಂದು ಉದ್ಯಮ ಲೇಖನವನ್ನು ಪಠ್ಯಕ್ರಮದಿಂದ ತೆಗೆದು ಹಾಕಲು ಮಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ .
೨೦೧೭ - ೧೮ ನೇ ಶೈಕ್ಷಣಿಕ ವರ್ಷದ ಬಿಸಿಎ ಪದವಿಯ ಮೊದಲ ಸೆಮಿಸ್ಟರ್ ನ ಕನ್ನಡ ಭಾಷಾ ಬೋಧನೆಯ ಪದ ಚಿತ್ತಾರ ಪಠ್ಯದಲ್ಲಿ ಯುದ್ಧ ಒಂದು ಉದ್ಯಮ ಲೇಖನ ಬಗ್ಗೆ ಭಾರೀ ವಿವಾದ ಕ್ಕೆ ಗುರಿಯಾಗಿತ್ತು.ಬರಗೂರರ ಈ ಲೇಖನದಲ್ಲಿ ಸೈನಿಕರಿಗೆ ಅವಹೇಳನ ಮಾಡಲಾಗಿದೆ ಎಂದು ಮಾಜಿ ಸೈನಿಕರು ಕೂಡ ಲೇಖನದ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು .

ವಿವಿಧ ಸಂಘಟನೆಗಳು ಕೂಡ ಈ ಲೇಖನದ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪಠ್ಯವನ್ನು ಹಿಂದಕ್ಕೆ ಪಡೆಯುವಂತೆ ಸರ್ಕಾರಕ್ಕೆ ಮನವಿ ಕೂಡ ಸಲ್ಲಿಸಿದ್ದವು. ವಿದ್ಯಾರ್ಥಿ ಸಂಘಟನೆಗಳು ಕೂಡ ಈ ವಿವಾದಿತ ಲೇಖನವನ್ನು ಪಠ್ಯಕ್ರಮದಿಂದ ತೆಗೆದು ಹಾಕಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು .
ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪಠ್ಯಪುಸ್ತಕ ಸಂಪಾದಕ ಮಂಡಳಿಯ ಸಭೆಯಲ್ಲಿ ಸಮಾಲೋಚನೆ ನಡೆಸಿ ಈ ಪಾಠವನ್ನು ಹಿಂತೆಗೆ ದುಕೊಳ್ಳುವ ಬಗ್ಗೆ ತೀರ್ಮಾನಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಪಠ್ಯಪುಸ್ತಕ ಪ್ರಧಾನ ಸಂಪಾದಕ ಪ್ರೊ. ಶಿವರಾಮ ಶೆಟ್ಟಿ , ಯುದ್ಧ ಬೇಡ ಎನ್ನುವ ಸದಾಶಯ ಲೇಖಕರಿಗೆ ಇತ್ತೇ ಹೊರತು ಸೇನೆಗೆ ಅಥವಾ ಸೈನಿಕರಿಗೆ ಅವಮಾನ ಮಾಡುವ ಉದ್ದೇಶ ಈಲೇಖನದಲ್ಲಿ ಇರಲಿಲ್ಲ.

ಜಗತ್ತಿನಲ್ಲಿ ಪ್ರಸ್ತುತ ಇರುವ ವಿದ್ಯಮಾನದ ಬಗ್ಗೆ ಪಠ್ಯದಲ್ಲಿ ಚರ್ಚಿಸಲಾಗಿತ್ತು. ಆದರೆ ಇದು ಬೇರೆ ಬೇರೆ ಅರ್ಥಗಳನ್ನು ಪಡೆದುಕೊಂಡು ವಿರೋಧ ವ್ಯಕ್ತವಾದ ಹಿನ್ನೆಲೆ ಈ ಪಾಠವನ್ನು ಹಿಂದಕ್ಕೆ ಪಡೆಯಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications