ಕೊರಗಜ್ಜ ದೇವಸ್ಥಾನ ಆಯ್ತು, ಇದೀಗ ಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆ
ಮಂಗಳೂರು, ಏಪ್ರಿಲ್ 5: ಕರಾವಳಿಯಲ್ಲಿ ಇತ್ತೀಚೆಗೆ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಕೃತ್ಯಗಳನ್ನು ಕಿಡಿಗೇಡಿಗಳು ವ್ಯಾಪಕವಾಗಿ ಮಾಡುತ್ತಿದ್ದು ಕರಾವಳಿಯ ಸೌಹಾರ್ದ ಪರಂಪರೆಯನ್ನು ಕೆಡಹುವ ಯತ್ನಗಳನ್ನು ಮಾಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಆರಾಧ್ಯ ದೈವ ಕೊರಗಜ್ಜನ ಸನ್ನಿಧಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಕಿ ವಿಕೃತಿ ಮೆರೆದವರು ರಕ್ತಕಾರಿ ಸಾವನ್ನಪ್ಪಿರುವ ಘಟನೆ ಎಲ್ಲರಿಗೂ ಗೊತ್ತೇ ಇದೆ.
ಕಿಡಿಗೇಡಿಗಳಿಗೆ ಕೊರಗಜ್ಜ ದೇವರೇ ಉಗ್ರ ಶಿಕ್ಷೆ ನೀಡಿದೆ ಎಂದು ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಈ ಘಟನೆ ಕಣ್ಮುಂದೆ ಇರುವಾಗಲೇ ಮತ್ತೊಂದು ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿರುವುದು ಭಕ್ತರಲ್ಲಿ ಅಸಮಾಧಾನ ಉಂಟುಮಾಡಿದೆ.

ಮಂಗಳೂರು ನಗರ ಹೊರವಲಯದ ಕೊಂಡಾಣ ಕ್ಷೇತ್ರದ ಕಟ್ಟೆ ಜಾತ್ರೆ ಕೆಲ ದಿನಗಳ ಹಿಂದಷ್ಟೆ ನಡೆದಿದ್ದು, ಆ ಪ್ರಯುಕ್ತ ಆಡಳಿತ ಸಮಿತಿಯು ಭಾನುವಾರ ಬೆಳಗ್ಗೆ ಕಾಣಿಕೆ ಹುಂಡಿಗಳನ್ನು ತೆರೆದು ಹಣ ಎಣಿಸುತ್ತಿದ್ದ ಸಂದರ್ಭ ಕೊಂಡಾಣ ಕ್ಷೇತ್ರದ ಮುಖ್ಯ ದ್ವಾರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದೆ.
ಎರಡು ತಿಂಗಳ ಹಿಂದೆ ಉಳ್ಳಾಲ ನಗರಸಭೆ ಕಚೇರಿ ಬಳಿಯ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಇಬ್ಬರು ಆರೋಪಿಗಳು ಮಂಗಳೂರಿನಲ್ಲಿ ಕೊರಗಜ್ಜನ ಕೋಲಕ್ಕೆ ಬಂದು ತಪ್ಪೊಪ್ಪಿಗೆ ಕೇಳಿದ್ದರು. ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಕಾರಣಿಕ ಕ್ಷೇತ್ರ ಕೊಂಡಾಣ ದೈವಸ್ಥಾನದಲ್ಲಿ ಆರೋಪಿಗಳು ದುಷ್ಕೃತ್ಯ ಎಸಗಿರುವುದು ಕಂಡುಬಂದಿದೆ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎರಡು ದಿನದ ಅವಧಿಯಲ್ಲಿ ಧಾರ್ಮಿಕ ಭಾವನೆ ಕೆದಕುವ ಎರಡನೇ ಪ್ರಯತ್ನ ಇದಾಗಿದ್ದು, ಭಾನುವಾರ ನಸುಕಿನ ಜಾವ ಸುರತ್ಕಲ್ ಸಮೀಪದ ಕೃಷ್ಣಾಪುರ ಜನತಾ ಕಾಲೊನಿಯ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರೆ, ಇದೀಗ ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications