ಮಂಗಳೂರು: ಬ್ಯಾಂಕಿನ 7.5 ಕೋಟಿ ರು ಹಣದೊಂದಿಗೆ ನಾಲ್ವರು ಎಸ್ಕೇಪ್
ಮಂಗಳೂರು, ಮೇ 12: ನಗರದ ಯೆಯ್ಯಾಡಿಯಲ್ಲಿರುವ ಆಕ್ಸಿಸ್ ಬ್ಯಾಂಕ್ನ ಕರೆನ್ಸಿ ಚೆಸ್ಟ್ ನಿಂದ 7.5 ಕೋಟಿ ನಗದು ಹಣವನ್ನು ಬೆಂಗಳೂರಿನ ಕೋರಮಂಗಲದ ಆಕ್ಸಿಸ್ ಬ್ಯಾಂಕ್ ಶಾಖೆಗೆ ಸಾಗಿಸುತ್ತಿದ್ದ ನಾಲ್ವರು ಸಿಬ್ಬಂದಿಗಳು ನಾಪತ್ತೆಯಾದ ಘಟನೆ ಗುರುವಾರ ನಡೆದಿದೆ. ಆದರೆ, ಈ ಪ್ರಕರಣ ಶುಕ್ರವಾರ ಬೆಳಕಿಗೆ ಬಂದಿದೆ.
ಮೇ 11 ರಂದು ಸಿಸ್ ಪ್ರೊಸೆಗೂರ್ ಹೋಲ್ಡಿಂಗ್ಸ್ ಸಂಸ್ಥೆಯ ಕಸ್ಟೋಡಿಯನ್ ಪರಶುರಾಮ, ಚಾಲಕ ಕರಿಬಸವ ಮತ್ತು ಗನ್ ಮ್ಯಾನ್ಗಳಾದ ಬಸಪ್ಪ ಮತ್ತು ಪೂವಣ್ಣ ಅವರು ತೆರಳಿದ್ದರು. ಆದರೆ ಇದುವರೆಗೆ ಬ್ಯಾಂಕ್ಗೆ ತಲುಪದೆ ನಾಪತ್ತೆಯಾಗಿದ್ದಾರೆ.

ಆಕ್ಸಿಸ್ ಬ್ಯಾಂಕ್ನ ಹಣ ಸಾಗಣೆ ಗುತ್ತಿಗೆ ಪಡೆದಿರುವ ಕೊಂಚಾಡಿಯ ಸಿಸ್ ಪ್ರೊಸೆಗೂರ್ ಹೋಲ್ಡಿಂಗ್ಸ್ ಸಂಸ್ಥೆಯ ಕಸ್ಟೋಡಿಯನ್ ಕಂಪೆನಿಯ ನಾಲ್ವರು ನೌಕರರು ಗುರುವಾರ (ಮೇ 11) ಬೆಳಿಗ್ಗೆ ಬೊಲೆರೋ ವಾಹನದಲ್ಲಿ 7.5 ಕೋಟಿ ನಗದನ್ನು ಯೆಯ್ಯಾಡಿ ಕರೆನ್ಸಿ ಚೆಸ್ಟ್ ನಿಂದ ತುಂಬಿಸಿಕೊಂಡು ಬೆಂಗಳೂರಿಗೆ ಹೊರಟಿದ್ದರು.
ಮೇ 12 ಶುಕ್ರವಾರ ಬೆಳಿಗ್ಗೆಯವರೆಗೂ ಅವರು ಕೋರಮಂಗಲ ಶಾಖೆಗೆ ಹಣ ತಲುಪಿಸಿರಲಿಲ್ಲ. ಹಣ ತುಂಬಿಸಿಕೊಂಡು ಹೋಗಿದ್ದ ವಾಹನ ಶುಕ್ರವಾರ ಸಂಜೆ ವೇಳೆಗೆ ಹುಣಸೂರು ತಾಲ್ಲೂಕಿನ ಅರಸು ಕಲ್ಲಹಳ್ಳಿಯಲ್ಲಿ ಪತ್ತೆಯಾಗಿದೆ.

ಹಣ ಸಾಗಿಸುತ್ತಿದ್ದ ನಾಲ್ವರ ಮೊಬೈಲ್ಗಳು ಸ್ವಿಚ್ ಆಫ್ ಆಗಿವೆ. ಅವರನ್ನು ಸಂಪರ್ಕಿಸಲು ನಡೆಸಿದ ಪ್ರಯತ್ನ ಸಫಲವಾಗಿಲ್ಲ. ವಾಹನ ಮತ್ತು ಅದರಲ್ಲಿದ್ದ ನೌಕರರಿಗಾಗಿ ಶೋಧಕಾರ್ಯ ಆರಂಭಿಸಲಾಗಿದೆ.
ವಾಹನವನ್ನು ವಶಕ್ಕೆ ಪಡೆಯಲು ಕಂಕನಾಡಿ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿನಾಯ್ಕ್ ನೇತೃತ್ವದ ತಂಡ ಅರಸು ಕಲ್ಲಹಳ್ಳಿಗೆ ಹೊರಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications