ಮಂಗಳೂರು ರಥೋತ್ಸವ: ಕಾಶೀ ಮಠಾಧೀಶರಿಗೆ ಭವ್ಯ ಸ್ವಾಗತ
ಮಂಗಳೂರು, ಫೆ 7: ಪ್ರಸಿದ್ಧ ಮಂಗಳೂರು ರಥೋತ್ಸವ ಪ್ರಯುಕ್ತ ವಿಳಂಬಿ ನಾಮ ಸಂವತ್ಸರದ ಶ್ರೀ ದೇವರ ರಥೋತ್ಸವ ನಗರದ ರಥಬೀದಿಯಲ್ಲಿ ನಡೆಯಲಿದೆ.
ಶ್ರೀ ಕಾಶೀ ಮಠ ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಗುರುವಾರದಂದು ತಮ್ಮ ಹುಬ್ಬಳ್ಳಿ ಮೊಕ್ಕಾಂ ನಿಂದ ಮಂಗಳೂರಿಗೆ ಆಗಮಿಸಿದರು. ಈ ಪ್ರಯುಕ್ತ ರಥಬೀದಿಯಲ್ಲಿರುವ ಸ್ವದೇಶೀ ಸ್ಟೋರ್ಸ್ ಬಳಿಯಿಂದ ಶ್ರೀ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸ ರಘುಪತಿ ನರಸಿಂಹ ದೇವರ ಸಹಿತ ಪರಮ ಪೂಜ್ಯ ಗುರುವರ್ಯರನ್ನು ಭವ್ಯವಾಗಿ ಸ್ವಾಗತಿಸಲಾಯಿತು.
ವಿವಿಧ ಬಿರುದು ಬಾವಳಿಗಳನ್ನೊಳಗೊಂಡ ವೇದ ಘೋಷ, ಪೂರ್ಣ ಕುಂಭ ಕಲಶ ಹಾಗೂ ವಿವಿಧ ವಾದ್ಯ ಘೋಷಗಳೊಂದಿಗೆ ವಿಶೇಷವಾಗಿ ಅಲಂಕರಿಸಲಾದ ಅಡ್ಡ ಪಲ್ಲಕಿಯಲ್ಲಿ ಶ್ರೀಗಳವರು ವಿರಾಜಮಾನರಾಗಿದ್ದು ಭವ್ಯ ಸ್ವಾಗತ ನೀಡಲಾಯಿತು.

ಇದೇ ಬರುವ ರಥಸಪ್ತಮಿ ಮಂಗಳವಾರ (ಫೆ 12) ದಂದು ಮಂಗಳೂರು ರಥೋತ್ಸವ ಶ್ರೀಗಳವರ ಮಾರ್ಗದರ್ಶನ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ಜರುಗಲಿರುವುದು, ದಿನಾಂಕ 15-02-2019 ರ ಪರ್ಯಂತ ಶ್ರೀಗಳವರು ಶ್ರೀದೇವಳದ ಮೊಕ್ಕಾಂ ನಲ್ಲಿದ್ದು ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಶ್ರೀಗಳವರ ಆಜ್ಞಾನುಸಾರ ನಡೆಯಲಿದೆ .
ಈ ರಥೋತ್ಸವ ಸಂದರ್ಭದಲ್ಲಿ ದೇವಳದಲ್ಲಿ ದಿನ ನಿತ್ಯ ವಿವಿಧ ಉತ್ಸವಗಳು , ಯಜ್ಞ -ಹವನಾದಿಗಳು ವೈದಿಕರಿಂದ ನಡೆಯಲಿರುವುದು, ದೇಶ ವಿದೇಶಗಳಿಂದ ಸಾವಿರಾರು ಜಿ . ಎಸ್ . ಬಿ ಸಮಾಜ ಭಾಂದವರು ಪಾಲ್ಗೊಳ್ಳಲಿರುವರು. (ಚಿತ್ರ: ಮಂಜು ನೀರೇಶ್ವಾಲ್ಯ)
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications