ಚೀನಾ ವಸ್ತುಗಳ ಬಹಿಷ್ಕಾರಕ್ಕೆ ವಿ.ಎಚ್.ಪಿ, ಭಜರಂಗದಳ ಕರೆ
ಮಂಗಳೂರು, ಸೆಪ್ಟೆಂಬರ್ 1: ಬಜರಂಗದಳ ದೇಶದಲ್ಲಿ ಚೀನಾ ವಸ್ತುಗಳ ಬಹಿಷ್ಕಾರಕ್ಕಾಗಿ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿಶ್ವ ಹಿಂದು ಪರಿಷತ್ (ವಿ.ಎಚ್.ಪಿ), ಭಜರಂಗದಳದ ಕಾರ್ಯಕರ್ತರು ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಪ್ರತಿಭಟನೆ ನಡೆಸಿದರು.
ಮಂಗಳೂರಿನ ಕದ್ರಿ ಮೈದಾನದಲ್ಲಿ ಸೇರಿದ ನೂರಾರು ವಿ.ಎಚ್.ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಚೀನಾ ನಿರ್ಮಿತ ಆಟಿಕೆ ಸಾಮಾಗ್ರಿ, ಎಲೆಕ್ಟ್ರಾನಿಕ್ ಉಪಕರಣ ಹಾಗೂ ಚೀನಾದಿಂದ ಆಮದಾದ ಇತರ ವಸ್ತುಗಳನ್ನು ದಹಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಕಿರಿಕ್ ಚೀನಾಕ್ಕೆ ಹೊಡೆತ
ಚೀನಾ ಹಾಗೂ ಭಾರತದ ಗಡಿ ಭಾಗವಾದ ಧೋಕ್ಲಾಮ್ ನಲ್ಲಿ ಸೇನಾ ಪಡೆಗಳ ನಡುವೆ ಘರ್ಷಣೆ ಸಂಭವಿಸಿತ್ತು .ಚೀನಾ ಭಾರತದ ಸೇನೆಗೆ ನಿರಂತರ ಉಪಟಳವನ್ನು ಕೊಡುತ್ತಿದ್ದು, ಗಡಿಯಲ್ಲಿ ಬಿಗುವಿನ ವಾತಾವರಣವನ್ನೂ ನಿರ್ಮಿಸಿದೆ. ಅಲ್ಲದೆ ಅರುಣಾಚಲಪ್ರದೇಶವನ್ನೂ ಚೀನಾ ತನ್ನದೆಂದು ಖ್ಯಾತೆ ತೆಗೆಯುತ್ತಲೆ ಬಂದಿದೆ.

ಚೀನಾ ನಿರ್ಮಿತ ವಸ್ತುಗಳ ಬಹಿಷ್ಕಾರಿಸಿ
ಚೀನಾದ ಇಂಥಹ ಆಕ್ರಮಣಶೀಲತೆಗೆ ಹೊಡೆತ ನೀಡಲು ಚೀನಾ ನಿರ್ಮಿತ ವಸ್ತುಗಳ ಬಹಿಷ್ಕಾರದಿಂದಲೇ ಸಾಧ್ಯ ಎನ್ನುವ ಮಾತು ಆಂದೋಲನದಲ್ಲಿ ಕೇಳಿಬಂತು.

ಚೀನಾ ಆರ್ಥಿಕತೆಗೆ ಭಾರತದ ಕೊಡುಗೆ
ಚೀನಾದ ಆರ್ಥಿಕತೆಯು ಭಾರತೀಯ ಮಾರುಕಟ್ಟೆಯನ್ನು ಅವಲಂಬಿಸಿದೆ. ಚೀನಾ ದೇಶದ ಆರ್ಥಿಕತೆಯ ಶೇಕಡಾ 17 ಭಾಗ ಭಾರತದ ಮಾರುಕಟ್ಟೆಯಿಂದಲೇ ಬರುತ್ತಿದೆ.

ಚೀನಾ ಆರ್ಥಿಕತೆ ಹೊಡೆತ ನೀಡಿ
ಒಂದು ವೇಳೆ ಭಾರತದಲ್ಲಿ ಚೀನಾ ವಸ್ತುಗಳನ್ನು ಬಹಿಷ್ಕರಿಸಿದ್ದೇ ಆದಲ್ಲಿ ಆ ದೇಶದ ಆರ್ಥಿಕ ಶಕ್ತಿಗೆ ಭಾರೀ ಹೊಡೆತ ಬೀಳಲಿದೆ ಎಂದು ಪ್ರತಿಭಟನಾಕಾರರನ್ನು ಉದ್ಧೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಪ್ರಾಂತ ಅಧ್ಯಕ್ಷ ಎಂ.ಬಿ.ಪುರಾಣಿಕ್ ಹೇಳಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications