ಜೂನಿಯರ್ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳಿಂದ ಹಲ್ಲೆ
ಮಂಗಳೂರು, ಮಾರ್ಚ್ 9 : ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನ ವಿದ್ಯಾರ್ಥಿಗಳಿಬ್ಬರ ಮೇಲೆ ಅದೇ ಕಾಲೇಜಿನ ಸೀನಿಯರ್ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಪ್ರಥಮ ವರ್ಷದ ಬಿಬಿಎ ಇಬ್ಬರು ವಿದ್ಯಾರ್ಥಿಗಳ ಹಾಗೂ ಅದೇ ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ವಾಕ್ಸಮರ ಉಂಟಾಗಿದೆ. ಈ ವೇಳೆ ಎಬಿವಿಪಿ ಕಾರ್ಯಕರ್ತರೆನ್ನಲಾದ ಅದೇ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿಗಳ ತಂಡವೊಂದು ಹಲ್ಲೆ ಮಾಡಿದೆ.

ಹಲ್ಲೆಗೊಳಗಾದ ಉಕಾಂತ್ ಮತ್ತು ನವಾಝ್ ಗಾಯಗೊಂಡಿದ್ದು ಇವರಿಬ್ಬರನ್ನ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹಲ್ಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ.
ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications