ಮಂಗಳೂರಲ್ಲಿ ಜಲಕ್ಷಾಮ: ಕುಡಿಯುವ ನೀರು ಪೂರೈಕೆಗೆ ವೇಳಾಪಟ್ಟಿ
ಏಪ್ರಿಲಿಗೂ ಮೊದಲೇ ಮಂಗಳೂರಲ್ಲಿಯೂ ಜಲಕ್ಷಾಮ ಕಾಣಿಸಿಕೊಂಡಿದೆ. ಬಿಸಿಲ ಬೇಗೆಗೆ ತುಂಬೆ ಅಣೆಕಟ್ಟಿನಲ್ಲಿ ನೇತ್ರಾವತಿ ನದಿ ನೀರಿನ ಒಳಹರಿವು ಸ್ಥಗಿತಗೊಂಡಿದೆ. ಹೀಗಾಗಿ ಮಂಗಳೂರು ಮಹಾನಗರ ಪಾಲಿಕೆ ನೀರಿನ ಪೂರೈಕೆಯಲ್ಲಿ ಕಡಿತ ಮಾಡಲು ಮುಂದಾಗಿದೆ.
ಮಂಗಳೂರು, ಮಾರ್ಚ್ 16: ಏಪ್ರಿಲಿಗೂ ಮೊದಲೇ ಮಂಗಳೂರಲ್ಲಿಯೂ ಜಲಕ್ಷಾಮ ಕಾಣಿಸಿಕೊಂಡಿದೆ. ಬಿಸಿಲ ಬೇಗೆಗೆ ತುಂಬೆ ಅಣೆಕಟ್ಟಿನಲ್ಲಿ ನೇತ್ರಾವತಿ ನದಿ ನೀರಿನ ಒಳಹರಿವು ಸ್ಥಗಿತಗೊಂಡಿದೆ. ಹೀಗಾಗಿ ಮಂಗಳೂರು ಮಹಾನಗರ ಪಾಲಿಕೆ ನೀರಿನ ಪೂರೈಕೆಯಲ್ಲಿ ಕಡಿತ ಮಾಡಲು ಮುಂದಾಗಿದೆ.
ಮಾರ್ಚ್ 20ರಿಂದ ಪ್ರತಿ ಒಂದೂವರೆ ದಿನಕ್ಕೊಮ್ಮೆ ನೀರು ಪೂರೈಕೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಕವಿತಾ ಸನಿಲ್ ತಿಳಿಸಿದ್ದಾರೆ. ಸದ್ಯ ತುಂಬೆ ಅಣೆಕಟ್ಟಿನಲ್ಲಿ ಲಭ್ಯವಿರುವ ನೀರನ್ನು ಮೇ ಅಂತ್ಯದವರೆಗೆ ನಗರದ ಜನರಿಗೆ ಪೂರೈಕೆ ಮಾಡಬೇಕಾಗಿದೆ. ಇದರ ಸಲುವಾಗಿ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. [ಮಂಗಳೂರಿನಲ್ಲಿ ವಿಚಾರವಾದಿ ನರೇಂದ್ರ ನಾಯಕ್ ಮೇಲೆ ದಾಳಿಗೆ ಯತ್ನ?]
ತುಂಬೆಯ ಎಎಂಆರ್ಡ್ಯಾಂನಲ್ಲಿ 6.25 ಮೀಟರ್ ನೀರು ಇದೆ. ಇದು 40 ದಿನಗಳಿಗೆ ಸಾಕಾಗಬಹುದು. ಅಲ್ಲದೆ ತುಂಬೆಯಲ್ಲಿ 4.15 ಮೀಟರ್ನಷ್ಟು ನೀರು ಸಂಗ್ರಹವಿದ್ದು 20 ದಿನಕ್ಕೆ ಸಾಕು. ಈಗಾಗಲೇ ಸುಬ್ರಹ್ಮಣ್ಯ, ಸುಳ್ಯ ಭಾಗಗಳಲ್ಲಿ ಮಳೆ ಬಿದ್ದಿದೆ. ಮಳೆ ಇನ್ನಷ್ಟು ಬಿದ್ದು ಮಾರ್ಚ್ 20ರ ಮೊದಲು ಹರಿವು ಹೆಚ್ಚಿದರೆ ಈ ಆದೇಶ ಹಿಂಪಡೆಯುವ ಸಾಧ್ಯತೆ ಇದೆ.
ಕಳೆದ ವರ್ಷ ನೀರು ಸ್ಥಗಿತ ಮಾಡುವಾಗ ತಡವಾಗಿತ್ತು. ಹೀಗಾಗಿ ಕೊನೆಯ ಕೆಲ ದಿನಗಳು ನಗರಕ್ಕೆ ನೀರು ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಎದುರಾಗಿತ್ತು. ಹಾಗಾಗಿ ಈ ಬಾರಿ ಸಾಕಷ್ಟು ಮುಂಚಿತವಾಗಿಯೇ ನೀರು ನಿಯಂತ್ರಣ ಮಾಡಲಾಗುತ್ತಿದೆ. ಸದ್ಯಕ್ಕೆ ನಿರ್ಮಾಣ ಹಂತದ ಕಟ್ಟಡಗಳಿಗೆ ನೀರು ಸ್ಥಗಿತಗೊಳಿಸಿಲ್ಲ. ಮುಂದೆ ಅಗತ್ಯವಿದ್ದರೆ ಏಪ್ರಿಲ್ ತಿಂಗಳಿಂದ ಅವರಿಗೂ ನೀರು ಸ್ಥಗಿತಗೊಳಿಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.
ಇನ್ನು ಎಸ್ಇಝಡ್ ಹಾಗೂ ಎಂಆರ್ಪಿಎಲ್ಗೂ ಜಿಲ್ಲಾಧಿಕಾರಿ ಆದೇಶದ ಮೇರೆಗೆ ನೀರಿನ ಪೂರೈಕೆ ಕಡಿಮೆ ಮಾಡಲಾಗಿದೆ. ಹೊಸ ಕಟ್ಟಡ ನಿರ್ಮಾಣಕ್ಕೂ ನೀರಿನ ಸರಬರಾಜು ಸ್ಥಗಿತಗೊಳಿಸಲಾಗಿದೆ.
ಮುಂದಿನ ನೀರು ಪೂರೈಕೆ ವೇಳಾಪಟ್ಟಿ
ಮಾ.20ರ ಸೋಮವಾರದಿಂದ ಬೆಳಗ್ಗೆ 6ರಿಂದ ಮಂಗಳವಾರ ಸಂಜೆ 6ರವರೆಗೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಮಂಗಳವಾರ ಸಂಜೆ 6ರಿಂದ ಗುರುವಾರ ಸಂಜೆ 6ರವರೆಗೆ ಎಲ್ಲಾ ಬಳಕೆದಾರರಿಗೆ ನೀರು ಪೂರೈಕೆಯಾಗಲಿದೆ.
ಗುರುವಾರ ಸಂಜೆ 6ರಿಂದ ಶನಿವಾರ ಬೆಳಗ್ಗೆ 6ರವರೆಗೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಶನಿವಾರ ಬೆಳಗ್ಗೆ 6ರಿಂದ ಸೋಮವಾರ ಬೆಳಗ್ಗೆ 6ರವರೆಗೆ ನೀರು ಪೂರೈಕೆಯಾಗಲಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications