ತೈಲ ಬೆಲೆ ಏರಿಕೆ ವಿರುದ್ಧ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು, ಫೆಬ್ರವರಿ 4: ನಗರದಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ಸೈಕಲ್ ಜಾಥಾ ಗುರುವಾರ ನಡೆಯಿತು. ನಗರದ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮಹಿಳಾ ಕಾಂಗ್ರೆಸ್ ನ ಕಾರ್ಯಕರ್ತೆಯರು ಪ್ರತಿಭಟನಾ ಜಾಥಾ ನಡೆಸಿದರು.
ಎತ್ತಿನಗಾಡಿ ತಳ್ಳಿಕೊಂಡು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸಿಗರು, 'ತೈಲ ಬೆಲೆ ಗಗನದಲ್ಲಿ ಪ್ರಧಾನಿ ವಿದೇಶದಲ್ಲಿ' ಎಂಬ ಪೋಸ್ಟರ್ ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಅಭಿವೃದ್ಧಿಯ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದೆ. ಯುಪಿಎ ಸರಕಾರದಲ್ಲಿ ತೈಲ ಬ್ಯಾರೆಲ್ ದರ ಏರಿಕೆಯಾಗಿದ್ದರೂ ದೇಶದಲ್ಲಿ ತೈಲ ಬೆಲೆ ಹೆಚ್ಚಾಗಲು ಬಿಟ್ಟಿರಲಿಲ್ಲ. ಆದರೆ ಕೇಂದ್ರ ಸರಕಾರದ ತಪ್ಪು ನಡೆಗಳಿಂದಾಗಿ ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಕೇಂದ್ರದಲ್ಲಿ ಬಿಜೆಪಿ ಮತ್ತೆ ಆಡಳಿತಕ್ಕೆ ಬರಬಾರದು ಎಂದು ಪ್ರತಿಭಟನಾಕಾರರು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಜಾಥಾದಲ್ಲಿ ನಟಿ ಹಾಗೂ ಕಾಂಗ್ರೆಸ್ ಮುಖಂಡರಾದ ಭಾವನಾ, ಮಂಗಳೂರು ಮೇಯರ್ ಕವಿತಾ ಸನಿಲ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಶಾಲೆಟ್ ಪಿಂಟೋ ಮತ್ತಿತರರು ಭಾಗವಹಿಸಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications