ಜೋಡುಪಾಲ ದುರಂತದಲ್ಲಿ ಮಗಳು ನಾಪತ್ತೆ: ಪ್ರತಿರೂಪಕ್ಕೆ ಅಂತ್ಯಸಂಸ್ಕಾರ ಮಾಡಿದ ಪೋಷಕರು
ಮಂಗಳೂರು, ಅಕ್ಟೋಬರ್ 12: ಕಳೆದ ಆಗಸ್ಟ್ 16 ರಂದು ಸಂಭವಿಸಿದ್ದ ದುರಂತದಿಂದ ಛಿದ್ರಗೊಂಡಿದ್ದ ಕೊಡಗು ಜಿಲ್ಲೆಯ ಗಡಿ ಪ್ರದೇಶ ಜೋಡುಪಾಲದಲ್ಲಿ ಈಗ ಜನಸಂಚಾರ ಆರಂಭವಾಗಿದೆ. ಜನರು ತಮ್ಮ ವಾಸ ಸ್ಥಾನಗಳಿಗೆ ಮರಳುತ್ತಿದ್ದಾರೆ.
ಜೋಡುಪಾಲದಲ್ಲಿ ಭಾರೀ ಭೂ ಕುಸಿತ, ಜಲಸ್ಪೋಟ ಸಂಭವಿಸಿ 57 ದಿನಗಳು ಕಳೆದಿವೆ. ಆದರೆ ದುರಂತದಲ್ಲಿ ಕಣ್ಮರೆಯಾದ ಮಂಜುಳಾ (15) ಮೃತ ದೇಹ ಇನ್ನೂ ಪತ್ತೆಯಾಗಿಲ್ಲ. ಇದರಿಂದ ಮನ ನೊಂದಿರುವ ಆಕೆಯ ಪೋಷಕರು ಮಂಜುಳಾ ಪ್ರತಿರೂಪ ತಯಾರಿಸಿ ಅದಕ್ಕೆ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ವಿಧಿವಿಧಾನ ಪೂರೈಸಿದ್ದಾರೆ.
ಕೊಡಗಿನ ಬೆಟ್ಟತ್ತೂರು ನಿವಾಸಿ ಸೋಮಯ್ಯ ಅವರ ಪುತ್ರಿ ಮಂಜಳಾ, ಮದೆನಾಡಿನ ಮದೆಮಹೇಶ್ವರ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು.
ಬೆಟ್ಟತ್ತೂರಿನಿಂದ ಮದೆನಾಡು ಕಡೆಗೆ ಒಂದೇ ಬಸ್ ವ್ಯವಸ್ಥೆ ಇದ್ದ ಹಿನ್ನೆಲೆಯಲ್ಲಿ ಆಕೆಯನ್ನು ಮದೆನಾಡು ಪಕ್ಕದ ಜೋಡುಪಾಲದ ತನ್ನ ಸಂಬಂಧಿಕರಾದ ಬಸಪ್ಪ ಅವರ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಮುಂದೆ ಓದಿ...

ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಂಜುಳಾ
ಆಗಸ್ಟ್ 16ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಭಾರೀ ಮಳೆಯಿಂದ ಸಂಭವಿಸಿದ ಜಲ ಸ್ಫೋಟದಿಂದಾಗಿ ಬೆಟ್ಟದ ಮೇಲಿಂದ ಭಾರೀ ಪ್ರಮಾಣದ ನೀರು ಬಸಪ್ಪ ಅವರ ಮನೆಗೆ ನುಗ್ಗಿತ್ತು. ಮನೆಯಲ್ಲಿದ್ದ ಬಸಪ್ಪ, ಗೌರಮ್ಮ, ಮೋನಿಶಾ ಸೇರಿದಂತೆ ಮಂಜುಳಾ ಕೂಡ ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ನಾಪತ್ತೆಯಾದ ಸ್ಥಳದಲ್ಲೇ ಅಂತ್ಯ ಸಂಸ್ಕಾರ
ಮಂಜುಳಾ ಹೊರತುಪಡಿಸಿ ಬಸಪ್ಪ, ಗೌರಮ್ಮ, ಮೋನಿಶಾ ಅವರ ಮೂವರ ಶವಗಳು ಪತ್ತೆಯಾಗಿ ಅಂತ್ಯ ಸಂಸ್ಕಾರವೂ ನಡೆದಿದೆ. ಆದರೆ ಮಂಜುಳಾ ಮೃತ ದೇಹ ಈವರೆಗೆ ಪತ್ತೆಯಾಗಿಲ್ಲ.ಈ ಹಿನ್ನೆಲೆಯಲ್ಲಿ ಪೋಷಕರು ಮಂಜುಳಾ ನಾಪತ್ತೆಯಾದ ಸ್ಥಳದಲ್ಲೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ.

ಸಂಪ್ರದಾಯದಂತೆ ಮದುವೆ ಶಾಸ್ತ್ರ
ಅಡಿಕೆ ಹಾಳೆಯಲ್ಲಿ ಮಂಜುಳಾ ಪ್ರತಿರೂಪ ತಯಾರಿಸಿ, ಅದಕ್ಕೆ ರೇಷ್ಮೆ ಸೀರೆ ತೊಡಿಸಿ, ಆಕೆಯ ಇಷ್ಟದ ವ್ಯಾನಿಟಿ ಬ್ಯಾಗ್ ಹಾಗೂ ಆಕೆ ಥ್ರೋಬಾಲ್ ಕ್ರೀಡೆಯಲ್ಲಿ ಗೆದ್ದ ಪದಕ ತೊಡಿಸಿ ಪ್ರತಿರೂಪವನ್ನು ಮದುಮಗಳಂತೆ ಸಿಂಗರಿಸಿದರು. ತದನಂತರ ಕುಡಿಯ ಸಂಪ್ರದಾಯದಂತೆ ಮದುವೆ ಶಾಸ್ತ್ರವನ್ನೂ ನೆರವೇರಿಸಿದ್ದಾರೆ.

ಮಂಜುಳಾ ಸಹಪಾಠಿಗಳು ಭಾಗಿ
ಈ ಸಂದರ್ಭದಲ್ಲಿ ಮಂಜುಳಾ ಅವರ ತಂದೆ ಕುಡಿಯರ ಸೋಮಯ್ಯ ಮತ್ತು ತಾಯಿ ಜಯಂತಿ ಅವರ ಕಣ್ಣೀರು ಆಕ್ರಂದನ ಮುಗಿಲು ಮುಟ್ಟಿತ್ತು. ಅಂತ್ಯಕ್ರಿಯೆಯಲ್ಲಿ ಮಂಜುಳಾ ಸಹಪಾಠಿಗಳು ಪಾಲ್ಗೊಂಡಿದ್ದರು. ನಂತರ ಮಂಜುಳಾ ಪ್ರತಿರೂಪವನ್ನು ಆಕೆಯ ಹುಟ್ಟೂರು ಬೆಟ್ಟತ್ತೂರುವಿಗೆ ಕೊಂಡೊಯ್ದು ಕುಟುಂಬಕ್ಕೆ ಸೇರಿದ ಸ್ಮಶಾನದಲ್ಲಿ ವಿದಿ ವಿಧಾನ ಮೂಲಕ ಪೂರೈಸಲಾಯಿತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications