ಮಂಗಳೂರಿಗೆ 100 ಕೋಟಿ ರು.ನೀಡುವಂತೆ ಸಿದ್ದರಾಮಯ್ಯಗೆ ಮನವಿ
ಮಂಗಳೂರು, ಮಾರ್ಚ್. 29 : 4ನೇ ಹಂತದಲ್ಲಿ ಮಂಗಳೂರು ಜಿಲ್ಲೆಗೆ 100 ಕೋಟಿ ರು. ಅನುದಾನ ನೀಡುವಂತೆ ಶಾಸಕ ಲೋಬೋ ನೇತೃತ್ವದಲ್ಲಿ ಮೇಯರ್ ಕವಿತಾ ಸುನೀಲ್ ಒಳಗೊಂಡ ನಿಯೋಗ ಮಂಗಳವಾರ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಗೆ 3ನೇ ಹಂತದ 100 ಕೋಟಿ ರು. ಹಣ ಮಂಜೂರಾಗಿದ್ದು, ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗಿದೆ. ಇನ್ನು ಹಲವಾರು ಕಾಮಗಾರಿಗಳು ಆರ್ಥಿಕ ಕೊರತೆಯಿಂದ ಅಪೂರ್ಣವಾಗಿ ಅರ್ಧಕ್ಕೆ ನಿಂತಿವೆ.[ಬರಾವಲೋಕನ: ಕಾಣೆಯಾಗಿರೋ ಮಂಗಳೂರಿನ 64 ಕೆರೆ ಹುಡಿಕಿಕೊಡಿ ಪ್ಲೀಸ್!!]

ಈ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹಾಗೂ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಜಿಲ್ಲೆಗೆ 4ನೇ ಹಂತದಲ್ಲಿ 100 ಕೋಟಿ ರು. ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ನೇತ್ರಾವತಿ ನದಿಗೆ ತುಂಬೆಯಲ್ಲಿ ನಿರ್ಮಿಸಲಾಗಿರುವ ನೂತನ ಕಿಂಡಿ ಅಣೆಕಟ್ಟಿನ ಎತ್ತರವನ್ನು 7 ಮೀಟರ್ಗೆ ಹೆಚ್ಚಿಸಿದ ಕಾರಣ ಹಿನ್ನೀರಿನಲ್ಲಿ ಸುಮಾರು 500 ಎಕರೆ ರೈತರ ಕೃಷಿ ಭೂಮಿ ಮುಳುಗಡೆಯಾಗಲಿದೆ.
ಇನ್ನು ಸಂತ್ರಸ್ತ ರೈತರಿಗೆ ಸಂಪೂರ್ಣ ಪರಿಹಾರ ನೀಡಲು ಅಗತ್ಯ ಅನುದಾನವನ್ನು ನೀಡಬೇಕು ಎಂದು ಮನವಿಯಲ್ಲಿ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.
ಮನಪಾದ ಹಿರಿಯ ಸದಸ್ಯರಾದ ಶಶಿಧರ ಹೆಗ್ಡೆ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ರವೂಫ್, ಇತರರು ಉಪಸ್ಥಿತರಿದ್ದರು
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications