ಸಾಯುವ ಮನಸ್ಸಿದ್ದವರು ಸಂಘ ಪರಿವಾರ ಸೇರಿ: ಕಾಂಗ್ರೆಸ್ ಕಾರ್ಪೊರೇಟರ್
ಮಂಗಳೂರು, ಫೆಬ್ರವರಿ 9: ಸಾಯುವ ಮನಸ್ಸಿದ್ದವರೆಲ್ಲಾ ಸಂಘ ಪರಿವಾರಕ್ಕೆ ಸೇರಿ ಎಂದು ಹೇಳಿಕೆ ನೀಡಿ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಒಬ್ಬರು ವಿವಾದಕ್ಕೆ ಗುರಿಯಾಗಿದ್ದಾರೆ. ಕಾರ್ಪೊರೇಟರ್ ಅವರ ಈ ಹೇಳಿಕೆ ಈಗ ಭಾರಿ ಚರ್ಚೆಗೆ ಗ್ರಾಸವಾಗಿದ್ದು ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಪಾಲಿಕೆ ಕಾಂಗ್ರೆಸ್ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಈ ಹೇಳಿಕೆ ನೀಡಿದ್ದು, ಅವರ ಹೇಳಿಕೆ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ. ಈ ವಿವಾದಿತ ಹೇಳಿಕೆ ಸಂಘ ಪರಿವಾರದ ಸಂಘಟನೆಗಳ ಕಾರ್ಯಕರ್ತರ ಕಣ್ಣು ಕೆಂಪಗಾಗಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕಾಂಗ್ರೆಸ್ ವತಿಯಿಂದ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರತಿಭಾ ಕುಳಾಯಿ, "ದುಡಿಯಲು ಮನಸ್ಸಿಲ್ಲದವರು ಸಂಘ ಪರಿವಾರ ಸೇರಿ. ಮರ್ಡರ್ ಮಾಡಿ ಬಂದರೆ ಸಾಕು ಜೈಲಿನಲ್ಲಿ ನಿಮಗೆ ಎಷ್ಟು ಬೇಕಾದರೂ ಅನ್ನ ಸಿಗುತ್ತದೆ. ಧರ್ಮಾರ್ಥ ನಿಮಗೆ ಜೈಲಿನಲ್ಲಿ ಅನ್ನ ಸಿಗುತ್ತದೆ," ಎಂದು ಸಂಘ ಪರಿವಾರದ ಕಾರ್ಯಕರ್ತರನ್ನು ವ್ಯಂಗ್ಯ ಮಾಡಿದ್ದರು.

ಹಲವಾರು ಹಿಂದೂಗಳನ್ನು ಹಿಂದೂ ಸಂಘಟನೆಯ ಕಾರ್ಯಕರ್ತರೇ ಕೊಂದಿದ್ದಾರೆ. ನಾನು ಕೂಡಾ ಹಿಂದು. ನನ್ನ ಬಣ್ಣ ಕೂಡಾ ಕೇಸರಿಯೇ. ಆದರೆ ಬಿಜೆಪಿಯವರು ಕೇಸರಿಯನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಪ್ರತಿಭಾ ಕುಳಾಯಿ ಆರೋಪಿಸಿದ್ದರು.
ಸಾಯುವ ಮನಸ್ಸಿದ್ದವರೆಲ್ಲಾ ಸಂಘ ಪರಿವಾರಕ್ಕೆ ಸೇರಿ ಎಂದು ಹೇಳಿದ್ದ ಅವರು, "ಯಾರಾದರೂ ಹಿಂದೂಗಳು ಸತ್ತರೆ ಸಾಕು. ಸಂಘ ಪರಿವಾರದವರು ಸಾಮಾಜಿಕ ಜಾಲತಾಣದಲ್ಲಿ ಸತ್ತವರ ಬಗ್ಗೆ ಪ್ರಚಾರ ಮಾಡ್ತಾರೆ. ಕೋಟಿ ಕೋಟಿ ಸಂಗ್ರಹ ಆಗಿದೆ ಅನ್ನುತ್ತಾರೆ. ಆದರೆ ಮನೆಯವರಿಗೆ ಒಂದು ರುಪಾಯಿ ಸಿಗುವುದಿಲ್ಲ," ಎಂದು ಅವರು ಆರೋಪಿಸಿದ್ದರು.
"ಹಿಂದೂ ಸತ್ತರೆ ಹಿಂದೂಪರ ಸಂಘಟನೆಗಳು ಸಂಭ್ರಮಿಸುತ್ತವೆ," ಎಂದು ಹೇಳಿಕೆ ನೀಡಿದ್ದ ಪ್ರತಿಭಾ ಕುಳಾಯಿ ವಿರುದ್ಧ ಈಗ ಸಂಘ ಪರಿವಾರದ ಸಂಘಟನೆಗಳು ತಿರುಗಿ ಬಿದ್ದಿವೆ. ಪ್ರತಿಭಾ ಕುಳಾಯಿ ಅವರ ಈ ಹೇಳಿಕೆ ವಿಡಿಯೋ ಈಗ ವೈರಲ್ ಆಗಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications