ಕ್ಲಾಸ್ ಆರಂಭ; ಅಧಿಕಾರಿಗಳಿಗೆ ಫೋಟೋ ಕಳಿಸಿದ ವಿದ್ಯಾರ್ಥಿಗಳು!
ಮಂಗಳೂರು, ಏಪ್ರಿಲ್ 22; ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಜನ ಸೇರುವ ಎಲ್ಲಾ ಕಾರ್ಯಕ್ರಮಗಳನ್ನು, ಶಾಪಿಂಗ್ ಮಾಲ್, ಶಾಲಾ-ಕಾಲೇಜುಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ.
ಮಂಗಳೂರು ನಗರದಲ್ಲಿ ಮಾತ್ರ ಕಾಲೇಜುಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ನಡೆಸಲಾಗುತ್ತಿತ್ತು. ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಮತ್ತು ಮುಕ್ಕ ಶ್ರೀನಿವಾಸ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ.
ದಾವಣಗೆರೆ; ತರಗತಿ ನಡೆಸುವ ದೂರು, ಕಾಲೇಜುಗಳಿಗೆ ಆಯುಕ್ತರ ಎಚ್ಚರಿಕೆ
ಕ್ಲಾಸ್ಗೆ ಬರುವಂತೆ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ತಿಳಿಸಿದ್ದು ಒಂದೇ ಕೊಠಡಿಯಲ್ಲಿ ನೂರಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕೂರಿಸಿಕೊಂಡು ಪಾಠ ಮಾಡಲಾಗುತ್ತಿದೆ.
ಕೊರೊನಾ ಕರ್ಫ್ಯೂ: ಹೊಸ ಕಠಿಣ ಮಾರ್ಗಸೂಚಿ ಪ್ರಕಟ, ಏನಿರುತ್ತೆ? ಏನಿರಲ್ಲ?
ಮೆಡಿಕಲ್ ವಿಭಾಗದ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಎಂಬಿಬಿಎಸ್, ಬಿಪಿಟಿ, ಬಿಎಸ್ಸಿ ನರ್ಸಿಂಗ್, ಮತ್ತು ಎಂಎಲ್ಟಿ ಕ್ಲಾಸ್ ಗಳು ನಡೆಯುತ್ತಿದೆ. ಈ ಕಾಲೇಜಿನಲ್ಲಿ ಕೇರಳ- ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳೇ ಅಧಿಕವಾಗಿದ್ದು, ಭಯದಿಂದಲೇ ಕ್ಲಾಸ್ ಕೇಳುವಂತಾಗದೆ.
ಮಂಗಳೂರು; ಜಾತ್ರೆ ಮಾಡಿದ ದೇವಾಲಯದ ವಿರುದ್ಧ ಪ್ರಕರಣ
ಕ್ಲಾಸ್ ನಡೆಯುತ್ತಿರುವ ಬಗ್ಗೆ ವಿದ್ಯಾರ್ಥಿಗಳೇ ಕ್ಲಾಸ್ ರೂಂ ಫೋಟೋ ತೆಗೆದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿದ್ದಾರೆ.ಸರ್ಕಾರದ ನಿಯಮ ಉಲ್ಲಂಘನೆ ಬಗ್ಗೆ ಅಧಿಕಾರಿಗಳ ಗಮನ ಸೆಳೆದಿದ್ದಾರೆ. ಈ ಬಗ್ಗೆ ಪಕ್ರಟಣೆ ಹೊರಡಿಸಿರುವ ಅಧಿಕಾರಿಗಳು ಕಾಲೇಜುಗಳು ಸರ್ಕಾರದ ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳನ್ನು ಕಾಲೇಜಿಗೆ ಬರುವಂತೆ ಒತ್ತಾಯ ಮಾಡಬಾರದು. ಶಿಕ್ಷಕರು ಮಾತ್ರ ಕಾಲೇಜಿಗೆ ಬಂದು ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 4 ರವರೆಗೆ ಕಾಲೇಜುಗಳಲ್ಲಿ ತರಗತಿಗಳು ನಡೆಯಬಾರದು. ತರಗತಿ ನಡೆಸಿದರೆ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.