ಕರಾವಳಿಯಲ್ಲಿ ಭಾರೀ ಮಳೆ: ಆಳ ಸಮುದ್ರದಿಂದ ಮರಳುತ್ತಿರುವ ಮೀನುಗಾರರು
Recommended Video

ಮಂಗಳೂರು, ಅಕ್ಟೋಬರ್. 05: ಅರಬ್ಬೀ ಸಮುದ್ರದಲ್ಲಿ ವಾಯು ಭಾರ ಕುಸಿತದಿಂದಾಗಿ ಕಡಲು ಪ್ರಕ್ಷುಬ್ಧಗೊಳ್ಳುತ್ತಿದೆ. ಸಮುದ್ರ ಮಧ್ಯೆ ಚಂಡಮಾರುತ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ಸುತ್ತ ಮುತ್ತಲ ಪ್ರದೇಶದಲ್ಲಿ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ.
ಸಮುದ್ರ ಪ್ರಕ್ಷುಬ್ದಗೊಳ್ಳುತ್ತಿರುವ ಕಾರಣ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ದಡಕ್ಕೆ ಮರಳುತ್ತಿದ್ದಾರೆ. ಭಾರೀ ಚಂಡಮಾರುತ ಬೀಸುವ ಎಚ್ಚರಿಯನ್ನು ಹವಾಮಾನ ಇಲಾಖೆ ರವಾನಿಸಿದ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಮಂಗಳೂರಿನ 350 ಕ್ಕೂ ಹೆಚ್ಚು ಮೀನುಗಾರಿಕಾ ದೋಣಿಗಳು ದಡಕ್ಕೆ ವಾಪಸಾಗಿವೆ.
ಇನ್ನಷ್ಟು ಮೀನುಗಾರಿಕಾ ದೋಣಿಗಳು ಆಳ ಕಡಲಿನಿಂದ ಮರಳುತ್ತಿವೆ. ಈ ನಡುವೆ ಸಮುದ್ರದಲ್ಲಿ ಗಾಳಿ ಮಳೆ ಆರಂಭವಾದರೆ ಆಳ ಸಮುದ್ರದಿಂದ ಮರಳುತ್ತಿರುವ ಮೀನುಗಾರರು ಆಪಾಯಕ್ಕೆ ಸಿಲುಕಬಹುದು ಎಂಬ ಆತಂಕ ವ್ಯಕ್ತಪಡಿಸಲಾಗಿದೆ.

ಅಕ್ಟೋಬರ್ 6ರಿಂದ 8ರವರೆಗೆ ಅರಬ್ಬೀ ಸಮುದ್ರವು ಪ್ರಕ್ಷುಬ್ಧಗೊಳ್ಳುವ ಸಂಭವವಿರುವುದರಿಂದ ಎಲ್ಲಾ ಮೀನುಗಾರರು ತಟಕ್ಕೆ ಮರಳುವಂತೆ ಸೂಚನೆ ರವಾನಿಸಿದ ಕಾರಣ ಮೀನುಗಾರರು ಕಡಲ ತಡಿಯತ್ತ ಮರಳತೊಡಗಿದ್ದಾರೆ.
ಈ ನಡುವೆ ಅಕ್ಟೋಬರ್ 6 ರಿಂದ 8 ರವರೆಗೆ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದೆ. ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರಿಕೆ ಬೋಟ್ ಗಳು ಅಕ್ಟೋಬರ್ 5ರೊಳಗೆ ದಡ ಸೇರುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆ ಈಗಾಗಲೇ ಸೂಚನೆ ರವಾನಿಸಿದೆ.

ಈ ನಡುವೆ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಲ್ಲಿ ಸಂಜೆ ಭಾರೀ ಮಳೆ ಸುರಿದಿದೆ. ಮಂಗಳೂರಿನಾದ್ಯಂತ ಭಾರೀ ಸಿಡಿಲು ಸಹಿತ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು . ನಗರದೆಲ್ಲೆಡೆ ಕತ್ತಲೆ ಆವರಿಸಿದ್ದು ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿಯುತ್ತಿದೆ.
-
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications