ಕಡಲ್ಕೊರೆತ ಕಾಮಗಾರಿ ಪರಿಶೀಲಿಸಿದ ಚಿಂಚನಸೂರ್
ಮಂಗಳೂರು, ಜ. 25 : ಕಡಲ್ಕೊರೆತ ಶಾಶ್ವತ ತಡೆಗೋಡೆ ಕಾಮಗಾರಿ ಪ್ರದೇಶಗಳಾದ ಉಳ್ಳಾಲ ಮೊಗವೀರಪಟ್ಣ ಪ್ರದೇಶಕ್ಕೆ ರಾಜ್ಯ ಜವುಳಿ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಬಾಬುರಾವ್ ಚಿಂಚನಸೂರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತರ ಮಾತನಾಡಿ, ಉಳ್ಳಾಲ ಕಡಲ್ಕೊರೆತ ಕಾಮಗಾರಿ ಸುಮಾರು 233 ಕೋಟಿ ರೂ. ಯೋಜನೆ. ಇಲ್ಲಿನ ಮೀನುಗಾರರ ಸಮಸ್ಯೆ ಏನು ಎಂಬುದು ನಮಗೆ ಗೊತ್ತು. ಮೀನುಗಾರರ ಸಮಸ್ಯೆ ದೂರವಾಗಬೇಕು. ನಾನು ಕೂಡ ಮೀನುಗಾರ ಸಮುದಾಯಕ್ಕೆ ಸೇರಿದವನಾಗಿರುವುದರಿಂದ ಅವರಿಗೆ ಏನು ಸಮಸ್ಯೆ ಇದೆ ಎಂಬುದು ನಮಗೆ ಗೊತ್ತು ಎಂದು ನುಡಿದರು.[ಎತ್ತಿನಹೊಳೆ 2 ವರ್ಷದಲ್ಲಿ ಪೂರ್ಣ: ವೀರಪ್ಪ ಮೊಯ್ಲಿ]

ದೊಡ್ಡ ಯೋಜನೆಯಿಂದ ಕೂಡಿರುವ ಕಡಲ್ಕೊರೆತ ಕಾಮಗಾರಿಯಿಂದ ಇಲ್ಲಿನ ಜನರ ಜೀವನಕ್ಕೆ ನೆಮ್ಮದಿ ಸಿಗಬೇಕು. ಸದಾ ಆತಂಕದಲ್ಲಿ ಬದುಕುವ ಇಲ್ಲಿನ ನಿವಾಸಿಗಳ ಬದುಕು ಹಸನಾಗಬೇಕು. ಅದಕ್ಕೆ ಸಕಲ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಮಂಗಳೂರಿನ ಇತಿಹಾಸದಲ್ಲಿಯೇ ಇದು ಬಲು ದೊಡ್ಡ ಯೋಜನೆ, ಮಹತ್ವದ ಕೆಲಸ. ಇಲ್ಲಿನ ಸಾಧಕ ಬಾಧಕಗಳನ್ನು ಗಮನಿಸಿ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಮೊಗವೀರ ಸಮುದಾಯದಿಂದ ಈ ಬಗ್ಗೆ ಮಾಹಿತಿ ಪಡೆದಿದ್ದು ಅನುಷ್ಠಾನಕ್ಕೆ ಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.[ಮಂಗಳೂರಿನ ಬಂದರಿನಲ್ಲಿ 23 ಹುದ್ದೆಗಳಿವೆ ಅರ್ಜಿ ಹಾಕಿ]

ಉಳ್ಳಾಲ ಬೀಚ್ ಉತ್ಸವ ಸಮಿತಿ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ ಮಾತನಾಡಿ, ಕಡಲ್ಕೊರೆತ ಕಾಮಗಾರಿ ಬ್ರೇಕ್ ವಾಟರ್ಗೆ ಪ್ರಥಮ ಆದ್ಯತೆ ನೀಡಬೇಕಿತ್ತು. ಅದು ಮುಗಿದ ನಂತರ ಈ ಕಾಮಗಾರಿ ನಡೆಸಬೇಕಿತ್ತು. ಇಲ್ಲಿ ಮೂರನೇ ಸ್ಟೇಜ್ ಕಾಮಗಾರಿ ಮೊದಲಿಗೆ ಮಾಡುತ್ತಿದ್ದು ಮೊದಲ ಕಾಮಗಾರಿ ನಡೆದೇ ಇಲ್ಲ. ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ಕಾರ ಮಣ್ಣೆರಚುವ ತಂತ್ರ ಮಾಡುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು ಎಲ್ಲ ಸಮಸ್ಯೆಗಳಿಗೆ ಸೂಕ್ತ ಪರಿಗಹಾರ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು. ಮೊಗವೀರ ಸಂಘದ ಅಧ್ಯಕ್ಷ ಸದಾನಂದ ಬಂಗೇರ, ಮೊಗವೀರ ಶಾಲಾ ಸಮೂಹ ಸಂಸ್ಥೆಗಳ ಸಂಚಾಲಕ ಬಾಬು ಬಂಗೇರ. , ಮೊಗವೀರ ಮುಖಂಡ ಲಕ್ಷ್ಮಣ ಅಮೀನ್, ಬಾಬು ಸಾಲ್ಯಾನ್, ಕೌನ್ಸಿಲರ್ ಯು.ಕೆ. ಮೊಯ್ಯುದ್ದಿನ್ ಹಾಜರಿದ್ದರು.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications