ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ಈಶ್ವರಪ್ಪ ಸ್ಪಷ್ಟನೆ

ಮಂಗಳೂರು, ನವೆಂಬರ್ 5: ಯಾವುದೇ ಕಾರಣಕ್ಕೂ ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.

ಮಂಗಳೂರು ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೂ ಮುನ್ನ ಮಾತನಾಡಿದ ಸಚಿವ ಈಶ್ವರಪ್ಪ, ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿರುವ ಸಿಬಿಐ ಕ್ರಮವನ್ನು ಸ್ವಾಗತಿಸುತ್ತೇನೆ ಎಂದರು.

ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐ ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ. ಅದೇ ರೀತಿ ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರಬಂದರೆ ತುಂಬಾ ಖುಷಿಪಡುತ್ತೇನೆ ಎಂದು ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಪಡಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದರು.

Mangalore: Minister K S Eshwarappa Reaction About Vinay Kulkarni CBI Enquiry

ಒಂದು ಕಾಲದಲ್ಲಿ ಅಧಿಕಾರ, ಹಣ ಉಪಯೋಗಿಸಿ ಕೊಲೆ, ಸುಲಿಗೆ, ಅತ್ಯಾಚಾರ, ದರೋಡೆ, ಭ್ರಷ್ಟಾಚಾರಗಳು ನಡೆಯುತ್ತಿದ್ದವು. ಅದೇ ಸರ್ಕಾರ ಯಾವಾಗಲೂ ಇರುತ್ತದೆ ಎಂದು ಹೇಳಲು ಆಗುವುದಿಲ್ಲ. ಈಗ ಸಿಬಿಐ ತನಿಖೆ ನಡೆಸುತ್ತಿದೆ. ಈ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ. ವಿನಯ್ ಕುಲಕರ್ಣಿ ಅವರನ್ನು ಗುರುವಾರ (ನ.೫) ರಂದು ಸಿಬಿಐ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದೆ.

ನವೆಂಬರ್ 7ರಂದು ವಿನಯ್ ಕುಲಕರ್ಣಿ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದರು. ಆದರೆ ಜನ್ಮದಿನಕ್ಕೂ ಮುಂಚೆಯೇ ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ತಮ್ಮ ವಿಜಯ್ ಕುಲಕರ್ಣಿ ರೀತಿಯಲ್ಲೇ ಅಣ್ಣನನ್ನೂ ಜನ್ಮದಿನ ಮುಂಚೆಯೇ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+