ಮಂಗಳೂರು ವಿಮಾನ ನಿಲ್ದಾಣದಲ್ಲಿ ದಿನದ 24 ಗಂಟೆ ರಾಷ್ಟ್ರಧ್ವಜ ಹಾರಾಟ
ಮಂಗಳೂರು, ಅಕ್ಟೋಬರ್. 28 : ಇನ್ನು ಮುಂದೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿನದ 24 ಗಂಟೆಯೂ ಅತೀ ದೊಡ್ಡ ಭಾರತದ ತ್ರಿವರ್ಣ ಧ್ವಜ ಹಾರಾಡಲಿದೆ.
100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಬೃಹತ್ ರಾಷ್ಟ್ರ ಧ್ವಜಾರೋಹಣ ಶುಕ್ರವಾರ (ಅಕ್ಟೋಬರ್28) ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆರವೇರಿತು. [24*7 ಕಾರ್ಯನಿರ್ವಹಿಸಲಿದೆ ಮಂಗಳೂರು ವಿಮಾನ ನಿಲ್ದಾಣ]

ಈ ಸಂದರ್ಭ ಮಾತನಾಡಿದ ಸಚಿವ ರೈ, ರಾಷ್ಟ್ರಧ್ವಜವು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದವರ, ಪ್ರಾಣತ್ಯಾಗ ಮಾಡಿದವರ ಬಗ್ಗೆ ಹೆಮ್ಮೆ ಮೂಡಿಸುವ ಸಂಕೇತ. ದ.ಕ. ಜಿಲ್ಲೆಯಲ್ಲಿ ಅತೀ ದೊಡ್ಡ ರಾಷ್ಟ್ರಧ್ವಜ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿನದ 24 ಗಂಟೆಯೂ ಹಾರಾಡುವುದು ಹೆಮ್ಮೆಯ ವಿಚಾರ ಎಂದರು.

ಈ ವೇಳೆ ಜಿ.ಟಿ.ರಾಧಾಕೃಷ್ಣ ಮಾತನಾಡಿ, ಈ ಬೃಹತ್ ರಾಷ್ಟ್ರಧ್ವಜ ಹಾರಾಟಕ್ಕೆ 13 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಇದರ ಆರೋಹಣಕ್ಕೆ ಯಾಂತ್ರೀಕೃತ ಸೌಲಭ್ಯ ಕಲ್ಪಿಸಲಾಗಿದೆ. ಇದರ ಆರೋಹಣಕ್ಕೆ 3 ನಿಮಿಷಗಳ ಕಾಲಾವಕಾಶ ಅಗತ್ಯವಿದೆ ಎಂದರು.
ಪ್ರಯಾಣಿಕರ ಸಂತೃಪ್ತಿ ಸರ್ವೇಯ ಪ್ರಕಾರ ದೇಶದ 53 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 3ನೇ ಸ್ಥಾನದಲ್ಲಿದ್ದರೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನಕ್ಕೆ ಪಾತ್ರವಾಗಿದೆ.
2015-16ನೆ ಸಾಲಿನಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು 16.73 ಲಕ್ಷ ಪ್ರಯಾಣಿಕರು ಬಳಸಿದ್ದಾರೆ. ಪ್ರಸಕ್ತ ವರ್ಷ ಈ ಸಂಖ್ಯೆ 20 ಲಕ್ಷ ದಾಟುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲು, ವಿಮಾನ ನಿಲ್ದಾಣದ ನಿರ್ದೇಶಕ ಜಿ.ಟಿ.ರಾಧಾಕೃಷ್ಣ ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications