ಎತ್ತಿನಹೊಳೆ ಬಗ್ಗೆ ಡಿ.26ಕ್ಕೆ ಸಿಎಂ ಜೊತೆ ಚರ್ಚೆ: ಸಚಿವ ರೈ
ಮಂಗಳೂರು, ಡಿಸೆಂಬರ್ 20: ಎತ್ತಿನಹೊಳೆ ಯೋಜನೆ ವಿವಾದದ ಕುರಿತು ಡಿಸೆಂಬರ್ 26ರಂದು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡುತ್ತೇನೆ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು. ತುಂಬೆ ನೇತ್ರಾವತಿ ವೆಂಟೆಡ್ ಡ್ಯಾಂನಲ್ಲಿ ಬಾಗಿನ ಅರ್ಪಿಸಿ, ಪರಿಶೀಲನೆ ನಡೆಸಿದ ನಂತರ ಪತ್ರಕರ್ತರ ಜೊತೆ ಮಾತನಾಡಿದರು.
ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟಗಾರರೊಂದಿಗೆ ಸಹ ಚರ್ಚೆ ಮಾಡುತ್ತೇನೆ ಎಂದ ರೈ, ಸಭೆಯಲ್ಲಿ ಪಶ್ಚಿಮವಾಹಿನಿ ಯೋಜನೆ ಬಗ್ಗೆಯೂ ಚರ್ಚೆ ಮಾಡುತ್ತೇನೆ. ಈ ಸಭೆಯಲ್ಲಿ ಕರಾವಳಿ ಭಾಗದ ಶಾಸಕ, ಸಚಿವರು ಭಾಗಿಯಾಗಲಿದ್ದಾರೆ ಎಂದರು. ಇದೇ ವೇಳೆ ಸಚಿವ ರಮಾನಾಥ ರೈ, ಕೊಡಗು ಜಿಲ್ಲೆಯ ದಿಡ್ಡಳ್ಳಿಯಲ್ಲಿ ಒಕ್ಕಲೆಬ್ಬಿಸಿರುವ 577 ಅದಿವಾಸಿ ಕುಟುಂಬಗಳಿಗೆ ಅರಣ್ಯದಲ್ಲಿಯೇ ಭೂಮಿ ನೀಡಲು ಸಾಧ್ಯವಿಲ್ಲ. ಕಾನೂನಿನಲ್ಲಿ ಅದಕ್ಕೆ ಅವಕಾಶವಿಲ್ಲ ಎಂದು ಹೇಳಿದರು.[50 ಕೋಟಿ ಲಂಚ ಪಡೆದ ಕೈ ಸಚಿವರ ಹೆಸರು ತಿಳಿಸಿ: ಪೂಜಾರಿ]

ಸಂಕಷ್ಟ ಎದುರಿಸುತ್ತಿರುವ ಅದಿವಾಸಿ ಕುಟುಂಬಗಳಿಗೆ ಕಂದಾಯ ಭೂಮಿ ನೀಡಲಾಗುವುದು ಎಂದರು. ಅನುವಂಶಿಯವಾಗಿ 2005ರ ಹಿಂದೆಯೇ ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಯಾವುದೇ ತೊಂದರೆ ಆಗಿಲ್ಲ. ಆದರೆ ದಿಡ್ಡಳ್ಳಿಯಲ್ಲಿ 577 ಅದಿವಾಸಿ ಕುಟುಂಬಗಳು 3 ತಿಂಗಳ ಹಿಂದೆ ಗುಡಿಸಲುಗಳನ್ನು ನಿರ್ಮಿಸಿವೆ. ಅದನ್ನು ಅರಣ್ಯ ಪ್ರದೇಶದಿಂದ ತೆರವುಗೊಳಿಸಲಾಗಿದೆ ಎಂದು ಅವರು ಹೇಳಿದರು.[ಎತ್ತಿನಹೊಳೆಗೆ ಕೋರ್ಟ್ ತಡೆ ನೀಡಲೆಂದು ಮಂಗಳೂರಲ್ಲಿ ಪ್ರಾರ್ಥನೆ]

ಒಕ್ಕಲೆಬ್ಬಿಸಿದ 577 ಅದಿವಾಸಿ ಕುಟುಂಬಗಳಿಗೆ ಅರಣ್ಯದಲ್ಲಿಯೇ ಭೂಮಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ 577 ಅದಿವಾಸಿ ಕುಟುಂಬಗಳಿಗೆ ಪರ್ಯಾಯವಾಗಿ ಕಂದಾಯ ಭೂಮಿ ನೀಡಲಾಗುವುದು, ಈ ನಿಟ್ಟಿನಲ್ಲಿ ಕೊಡಗು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications