ಮಂಗಳೂರಿನ ಪಿಲಿಕುಳದಲ್ಲಿ ನೂತನ ಮತ್ಸ್ಯಾಲಯ ಆರಂಭ
ಮಂಗಳೂರು, ಸೆಪ್ಟೆಂಬರ್, 14 : ವಿನಾಶದ ಅಂಚಿನಲ್ಲಿರುವ ಸಸ್ಯ, ಪ್ರಾಣಿ, ಪಕ್ಷಿ, ಮೀನಿನ ಸಂತತಿಯ ತಳಿಗಳನ್ನು ಸಂರಕ್ಷಿಸುವ ಅಗತ್ಯವಿದೆ ಎಂದು ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ಹೇಳಿದರು.
ನಗರದ ಪಿಳಿಕುಳ ನಿಸರ್ಗಧಾಮದಲ್ಲಿ ನೂತನ ಮತ್ಸ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಇಕೋ ಅರ್ಬನ್ ಪಾರ್ಕ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಬಿಡುಗಡೆಯಾಗಿರುವ 2 ಕೋಟಿ ಅನುದಾನವನ್ನು ಜಿಲ್ಲಾಡಳಿತಕ್ಕೆ ನೀಡಿದರು.[ನೇತ್ರಾವತಿ ಉಳಿಸಲು ಸೆ.15ರಂದು ದಿನಪೂರ್ತಿ ಹೆದ್ದಾರಿ ಬಂದ್]

ಸ್ಥಳೀಯವಾಗಿರುವ ಮೀನುಗಳಲ್ಲಿ ಇಂದು ಅನೇಕ ತಳಿಗಳು ಮರೆಯಾಗಿವೆ. ಈ ನಿಟ್ಟಿನಲ್ಲಿ ಪಿಲಿಕುಳ ನಿಸರ್ಗಧಾಮ ಹಮ್ಮಿಕೊಂಡಿರುವ ಯೋಜನೆ ಮಹತ್ತರವಾದುದು. ಇದಕ್ಕಾಗಿ ನಿಸರ್ಗಧಾಮ ಹಾಗೂ ಅನುದಾನ ಬಿಡುಗಡೆ ಮಾಡಿರುವ ಮೀನುಗಾರಿಕಾ ಇಲಾಖೆ ಸಚಿವ ಅಭಯ ಚಂದ್ರ ಅವರನ್ನು ಶ್ಲಾಘಿಸಿದರು.
ಇಕೋ ಅರ್ಬನ್ ಪಾರ್ಕ್ ಒಟ್ಟು 10 ಎಕರೆ ಜಾಗದಲ್ಲಿ ಸ್ಥಾಪನೆಯಾಗಲಿದ್ದು, ಇಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ, ತ್ಯಾಜ್ಯ ವಿಲೇವಾರಿ ಮಾದರಿ, ಕೈಗಾರಿಕೆಗಳ ತ್ಯಾಜ್ಯ ಸಂಸ್ಕರಣೆ, ಇಂಧನ ಉಳಿತಾಯ, ಮಳೆ ನೀರು ಕೊಯ್ಲು ಸೇರಿದಂತೆ ವಿವಿಧ ಅಂಶಗಳ ಮಾಹಿತಿ ನೀಡುವ ಮಾದರಿಗಳು, ಪ್ರಾತ್ಯಕ್ಷಿಕೆಗಳನ್ನು ಒಳಗೊಂಡಿದೆ ಎಂದು ಪಾರ್ಕಿನ ರೂಪುರೇಷೆ ಕುರಿತಾಗಿ ಮಾಹಿತಿ ನೀಡಿದರು.
ರಾಜ್ಯ ಮೀನುಗಾರಿಕೆ ಮತ್ತು ಯುವಸಬಲೀಕರಣ ಖಾತೆ ಸಚಿವ ಅಭಯ ಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಜೆ. ಆರ್ ಲೋಬೋ, ಮೊದೀನ್ ಬಾವಾ, ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ, ಉಪಮೇಯರ್ ಪುರುಷೋತ್ತಮ ಚಿತ್ರಾಪುರ ಮುಖ್ಯ ಅತಿಥಿಯಾಗಿದ್ದರು. ಪಿಲಿಕುಳ ವನ್ಯಜೀವಿ ಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ, ವಿಜ್ಞಾನ ಕೇಂದ್ರದ ನಿರ್ದೇಶಕ ಡಾ|| ಕೆ.ವಿ ರಾವ್ ಮತ್ತಿತರರು ಉಪಸ್ಥಿತರಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications