ಸೇತುವೆ ಧ್ವಂಸ ಮಾಡಿದ ದುಷ್ಕರ್ಮಿಗಳ ಬಂಧನಕ್ಕೆ ಕ್ರಮ : ಯು ಟಿ ಖಾದರ್
ಮಂಗಳೂರು ಫೆಬ್ರವರಿ 02: ದುಷ್ಕರ್ಮಿಗಳಿಂದ ಧ್ವಂಸಗೊಂಡ ಪಾವೂರು ಸೇತುವೆ ಪ್ರದೇಶಕ್ಕೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಯು ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಉಳಿಯ -ಪಾವೂರು ಪ್ರದೇಶ ಜನರೊಂದಿಗೆ ಮಾತುಕತೆ ನಡೆಸಿ ಆ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸ್ ದೂರು ನೀಡಿದಕ್ಕೆ ಈ ದಾಂಧಲೆ ನಡೆಸಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ನಂತರ ಮಾತನಾಡಿದ ಸಚಿವ ಯು ಟಿ ಖಾದರ್ ಜನರೇ ನಿರ್ಮಿಸಿದ್ದ ಸೇತುವೆ ಧ್ವಂಸ ಮಾಡಿದರನ್ನು ಬಂಧಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಕ್ರಮ ಮರುಳುಗಾರಿಕೆ ಬಗ್ಗೆಯೂ ಮಾತನಾಡಿದ ಅವರು, ಅಕ್ರಮ ಮರಳುಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಈ ಗಾಗಲೇ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಕೃತ್ಯ ಜಿಲ್ಲಾಡಳಿತಕ್ಕೆ ಎಸೆದಿರುವ ಸವಾಲು ಎಂದು ಪ್ರತಿಕ್ರಿಯಿಸಿದರು.

ಯು ಟಿ ಖಾದರ್ ಪ್ರತಿನಿಧಿಸುವ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಸರ್ಕಾರ ಭರವಸೆಯಿಂದ ಕಾದು ಸುಸ್ತಾದ ಪಾವೂರು ಪರಿಸರದ ಜನ ಇತ್ತೀಚೆಗೆ ತಮ್ಮ ಗ್ರಾಮ, ಕ್ಕೆ ತಾವೇ ಸೇತುವೆ ನಿರ್ಮಿಸಿದ್ದರು.ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಜನರು ನಿರ್ಮಿಸಿದ್ಗ ಸೇತುವೆಯನ್ನು ಧ್ವಂಸ ಗೊಳಿಸಿದ್ದರು. ಪಾವೂರು -ಉಳಿಯ ಪರಿಸರದಲ್ಲಿ ಅಕ್ರಮ ಮರಳು ತೆಗೆಯೋದರ ಬಗ್ಗೆ ಸ್ಥಳೀಯರು ಅಧಿಕಾರಿಗಳಿಗೆ ದೂರು ನೀಡಿದ್ದುರು.
ಈ ಹಿನ್ನೆಲೆಯಲ್ಲಿ ನಿನ್ನೆ ಬೆಳಗ್ಗೆ ಅಧಿಕಾರಿಗಳು 5 ಬೋಟ್ ವಶಪಡಿಸಿಕೊಂಡಿದ್ದರು.ಇದರ ದ್ವೇಷವನ್ನು ಗ್ರಾಮದ ಜನರ ಮೇಲೆ ತೀರಿಸಿರುವ ಮರಳು ದಂಧೆಕೋರರು,ಜನರೇ ನಿರ್ಮಿಸಿದ ಸೇತುವೆಯನ್ನು ಧ್ವಂಸ ಮಾಡಿದ್ದರು.ಸೇತುವೆ ಪಕ್ಕ ನಿಲ್ಲಿಸಿದ್ದ ಆಟೋ ರಿಕ್ಷಾ ಬೈಕ್ ಗಳನ್ನು ಪುಡಿ ಪುಡಿ ಮಾಡಿದ್ದರು.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications