ಯೋಧನ ಜೀವ ಉಳಿಸಿದ ಸಚಿವ ಯು.ಟಿ.ಖಾದರ್
ಮಂಗಳೂರು, ನವೆಂಬರ್ 06 : ಹಾವು ಕಡಿತದಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಯೋಧ ಸಂತೋಷ್ ಕುಮಾರ್ ಗೆ ಚಿಕಿತ್ಸೆ ಕೊಡಿಸಿ ಆಹಾರ ಮತ್ತು ನಾಗರೀಕ ಸಚಿವ ಯು.ಟಿ.ಖಾದರ್ ಮಾನವೀಯತೆ ಮೆರೆದಿದ್ದಾರೆ.
ಕಾಶ್ಮೀರದಲ್ಲಿ ಉಗ್ರರ ಜೊತೆ ಮುಖಾಮುಖಿಯಲ್ಲಿ ಗಾಯಗೊಂಡು ವಿಶ್ರಾಂತಿಗಾಗಿ ಸ್ವಗ್ರಾಮ ಮುಡಿಪು ಬಳಿಯ ಕೊಡಕಲ್ಲುಗೆ ಬಂದಿದ್ದ ಸೈನಿಕ ಸಂತೋಷ್ ಕುಮಾರ್ ಅವರಿಗೆ ನವೆಂಬರ್ 05ರ ಭಾನುವಾರ ಮಧ್ಯರಾತ್ರಿ ಹಾವು ಕಚ್ಚಿದೆ, ಕೂಡಲೆ ಅವರ ಕುಟುಂಬ ಸದಸ್ಯರು ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಗೆ ಸೇರಿಸಿದ್ದಾರೆ, ಆದರೆ ಆಸ್ಪತ್ರೆಯಲ್ಲಿ ಸೂಕ್ತ ಚುಚ್ಚುಮದ್ದು ಇರದ ಕಾರಣ ಚಿಕಿತ್ಸೆ ನಡೆಯದೆ ಸಂತೋಷ್ ಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ.

ಸಂತೋಷ್ ಕುಟುಂಬ ಸದಸ್ಯರು ಬೇರೆ ದಾರಿ ಕಾಣದೆ ಯು.ಟಿ.ಖಾದರ್ ಅವರನ್ನು ಸಂಪರ್ಕಿಸಿದ್ದಾರೆ, ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಸಚಿವ ಖಾದರ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಿಂದ ಚಿಕಿತ್ಸೆಗೆ ಅವಶ್ಯಕವಾಗಿದ್ದ 10 ಚುಚ್ಚುಮದ್ದುಗಳನ್ನು ತರಿಸಿ ಸಂತೋಷ್ ಅವರ ಜೀವ ಉಳಿಯಲು ನೆರವಾಗಿದ್ದಾರೆ.
ಪ್ರಸ್ತುತ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಕೆಲ ದಿನಗಳ ಮುಂಚೆಯಷ್ಟೆ ವೃದ್ಧ ದಂಪತಿಗಾಗಿ ಪಡಿತರ ಚೀಟಿ ನೊಂದಾವಣಿ ಯಂತ್ರಗಳನ್ನು ಅವರ ಮನೆಗೇ ಕೊಂಡೊಯ್ದು ಸಹಾಯ ಮಾಡಿದ್ದ ಖಾದರ್ ಅವರು ಆ ಮುಂಚೆ ಟ್ರಾಫಿಕ್ ನಲ್ಲಿ ಸಿಕ್ಕಿಕೊಂಡಿದ್ದ ಆಂಬ್ಯುಲೆನ್ಸ್ ಗೆ ದಾರಿ ಮಾಡಲು ಸ್ವತಃ ರಸ್ತೆಗಿಳಿದು ಟ್ರಾಫಿಕ್ ಕ್ಲಿಯರ್ ಮಾಡಿಸಿದ್ರು. ಹೋದಲ್ಲೆಲ್ಲಾ ತಮ್ಮ ಸಾಮಾಜಿಕ ಕಾರ್ಯಗಳಿಂದ ಗುರುತಿಸಿಕೊಳ್ಳುವ ಖಾದರ್ ಅವರಿಂದ ಮುಂದೆಯೂ ಇಂತಹಾ ಕಾರ್ಯಗಳಾಗಲಿ ಎಂಬುದು ಎಲ್ಲರ ಆಶಯ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications