ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಆಪತ್ಬಾಂಧವರಾದ ಸಚಿವ ಖಾದರ್
ಮಂಗಳೂರು, ಜನವರಿ. 14 : ಶಬರಿಮಲೆಯಿಂದ ಹಿಂದಿರುಗುತ್ತಿದ್ದ ಭಕ್ತರ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಶುಕ್ರವಾರ ನಗರದಲ್ಲಿ ನಡೆದಿದೆ.
ಈ ವೇಳೆ ಭಕ್ತರು ಅಸಹಾಯಕರಾಗಿ ನಿಂತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಆಹಾರ ಸಚಿವ ಯು ಟಿ ಖಾದರ್ ಸಕಾಲದಲ್ಲಿ ನೆರವು ನೀಡಿ ಆಪತ್ಬಾಂಧವರಾದರು.
ಶಬರಿಮಲೆ ಯಾತ್ರೆ ಮುಗಿಸಿಕೊಂಡು ಧರ್ಮಸ್ಥಳದಿಂದ ಹುಬ್ಬಳ್ಳಿಗೆ ಮರಳುತ್ತಿದ್ದ ಟಾಟಾ ಇಂಡಿಕಾ ಕಾರು ಶುಕ್ರವಾರ ರಾತ್ರಿ ಮಂಗಳೂರಿನ ಪಂಪ್ ವೆಲ್- ನಂತೂರು ಸರ್ಕಲ್ ರಸ್ತೆಯಲ್ಲಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿದ್ದು, ನೋಡುತ್ತಿದ್ದಂತೆ ಬೆಂಕಿ ತೀವ್ರವಾಗತೊಡಗಿತು. ಕಾರಿನಲ್ಲಿ ಚಾಲಕ ಸೇರಿ ಐದು ಜನ ಇದ್ದರು. [ಸಚಿವ ಯು.ಟಿ.ಖಾದರ್ ಉಳಿದವರಿಗೆ ಮಾದರಿಯಾಗಲಿ]

ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಸಚಿವ ಯು.ಟಿ. ಖಾದರ್ ಸಂಚರಿಸುತ್ತಿದ್ದು, ಘಟನೆಯನ್ನು ಕಂಡು ವಾಹನ ನಿಲ್ಲಿಸಿ ಉರಿಯುತ್ತಿರುವ ಕಾರಿನತ್ತ ಧಾವಿಸಿದರು. ತಕ್ಷಣವೇ ಶಬರಿಮಲೆ ಭಕ್ತರ ಕಾರಿನಲ್ಲಿ ಬೆಂಕಿಯನ್ನು ನಂದಿಸಲು ತಮ್ಮ ಕಾರಿನಲ್ಲಿದ್ದ ಅಲ್ಪಸ್ವಲ್ಪ ನೀರನ್ನು ಹಾಗೂ ಸ್ಥಳದಲ್ಲಿದ್ದ ಮಣ್ಣು ಕೈಯಿಂದಲೇ ಬೆಂಕಿ ಮೇಲೆ ಹಾಕಿ, ಬೆಂಕಿ ನಂದಿಸಲು ಪ್ರಯತ್ನಿಸಿದರು.
ಅಲ್ಲದೇ ಕಾರಿನಲ್ಲಿದ್ದ ಬಟ್ಟೆ ಬರೆ ಹಾಗೂ ಶಬರಿಮಲೆಯ ಪ್ರಸಾದದ ಪೊಟ್ಟಣಗಳನ್ನು ಸಚಿವರು ಕಾರಿನಿಂದ ತೆಗೆದು ರಕ್ಷಿಸಿದರು. ಬಳಿಕ ಅಗ್ನಿಶಾಮಕ ವಾಹನ ಬಂದು ಬೆಂಕಿ ನಂದಿಸಿತು.
ಇದಲ್ಲದೇ, ಅಯ್ಯಪ್ಪ ಮಾಲಾಧಾರಿಗಳಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿ, ಹುಬ್ಬಳ್ಳಿಗೆ ತರಳಲು ಹಣಕಾಸು ನೆರವನ್ನು ನೀಡಿ ಕೆಎಸ್ ಆರ್ಟಿಸಿ ಬಸ್ಸಿನಲ್ಲಿ ಅವರ ಸಂಚಾರಕ್ಕೆ ವ್ಯವಸ್ಥೆ ಮಾಡಿಸಿ ಸಚಿವ ಯು.ಟಿ ಖಾದರ್ ಮಾನವೀಯತೆ ಮರೆದಿದ್ದಾರೆ.
2014ರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಸಚಿವ ಖಾದರ್ ತಾವು ಆಟೋ ಮೂಲಕ ತೆರಳಿರುವುದು ಇಲ್ಲಿ ಸ್ಮರಿಸಬಹುದು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications