ವೃದ್ಧ ದಂಪತಿಗೆ ನೆರವಾಗಿ ಮಾನವೀಯತೆ ಮೆರೆದ ಸಚಿವ ಯುಟಿ ಖಾದರ್
ಮಂಗಳೂರು, ನವೆಂಬರ್ 02 : ರಾಜ್ಯ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ ಖಾದರ್ ತಮ್ಮ ಕ್ಷೇತ್ರದ ಅಶಕ್ತ ವೃದ್ಧ ದಂಪತಿಗಳಿಗೆ ನೆರವಾಗಿ ಮಾನವೀಯತೆ ಮೆರೆದ್ದಾರೆ.
ಸಚಿವ ಯು.ಟಿ.ಖಾದರ್ ತಮ್ಮ ಕ್ಷೇತ್ರದ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಪಲಗೆ ಭೇಟಿ ನೀಡಿದ್ದ ವೇಳೆ ವಯೋ ವೃದ್ದ ದಂಪತಿಗೆ ರೇಶನ್ ಕಾರ್ಡ್ ಮಾಡಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇತ್ತೀಚೆಗೆ ಕುಂಪಲ ಪರಿಸರದಲ್ಲಿ ರಸ್ತೆ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಅಮೃತ ನಗರದ ಬಳಿ ಸಚಿವರ ಕಾರನ್ನು ಕಂಡು ಕುಂಟುತ್ತಾ ಬಂದ 79 ವರ್ಷ ಪ್ರಾಯದ ಯಶವಂತ ಆಚಾರಿ ಅವರನ್ನು ನೋಡಿ ಸಚಿವರು ತಮ್ಮ ಕಾರನ್ನು ನಿಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ತನ್ನ ಅಳಲನ್ನು ತೋಡಿಕೊಂಡ ಯಶವಂತ ಆಚಾರಿ, ತನ್ನ ಬಳಿ ರೇಶನ್ ಕಾರ್ಡ್ ಇಲ್ಲ, ಜೀವನ ನಡೆಸಲು ಕಷ್ಟವಾಗಿದೆ. ತನ್ನ ಪತ್ನಿ ಪಾರ್ಶ್ವವಾಯು ಪೀಡಿತೆ. ಆದ್ದರಿಂದ ನಡೆದಾಡಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.
ಆಹಾರ ಸಚಿವ ಯು.ಟಿ.ಖಾದರ್ ವೃದ್ಧ ದಂಪತಿಗಳ ಅಳಲನ್ನು ಆಲಿಸಿ ತಮ್ಮ ಆಪ್ತರಿಗೆ ಈ ವಯೋ ವೃದ್ದ ದಂಪತಿಗಳ ಮನೆಗೆ ತೆರಳಿ ರೇಶನ್ ಕಾರ್ಡ್ ಮಾಡಿ ಕೊಡಲು ತಿಳಿಸಿದರು.

ಈ ಸಂದರ್ಭದಲ್ಲಿ ಮನೆಯಲ್ಲಿ ದಂಪತಿಗಳ ಬೆರಳಚ್ಚು ಪಡೆಯಲು ಸಾದ್ಯವಾಗದಿದ್ದಾಗ. ಸಚಿವರ ಆಪ್ತರು ತಮ್ನದೇ ವಾಹನದಲ್ಲಿ ದೇರಳಕಟ್ಟೆಯ ಗ್ರಾಹಕ ಸೇವಾ ಕೇಂದ್ರಕ್ಕೆ ಕರೆದುಕೊಂಡು ಹೋಗಿ ರೇಶನ್ ಕಾರ್ಡ್ ಮಾಡಿಸಿ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಗೂ ಈ ವೃದ್ಧ ದಂಪತಿಗೆ ಸರಕಾರದಲ್ಲಿ ಸಿಗುವ ಅನಿಲ ಬಾಗ್ಯ ಯೋಜನೆಯಲ್ಲಿ ಗ್ಯಾಸ್ ನೀಡುವ ಭರವಸೆಯನ್ನು ಖಾದರ್ ನೀಡಿದರು. ರೇಶನ್ ಕಾರ್ಡ್ ದೊರೆಯುತ್ತಿದ್ದಂತೆ ವೃದ್ಧ ದಂಪತಿ ಬಾವುಕರಾಗಿ ಆಹಾರ ಸಚಿವ ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ವಯೋ ವೃದ್ಧ ದಂಪತಿಗೆ ಸಚಿವ ಯುಟಿ ಖಾದರ್ ಆಸರೆಯಾದ ಫೋಟೋಗಳು ಈಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು. ಅವರ ಮಾನವೀಯತೆಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications