ಉಡುಪಿ, ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿದೆ ಅಪ್ರಾಪ್ತ ತಾಯಂದಿರ ಸಂಖ್ಯೆ
ಮಂಗಳೂರು, ಆಗಸ್ಟ್ 4 : ಆಟವಾಡುತ್ತಾ ಬಾಲ್ಯ ಕಳೆಯಬೇಕಾದ ಬಾಲಕಿಯರಿಗೇ ಮಕ್ಕಳಾದರೆ ಹೇಗೆ? ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಇಂಥ ಪ್ರಕರಣಗಳ ಸಂಖ್ಯೆಗಳು ಹೆಚ್ಚುತ್ತಿವೆ.
ಕಳೆದ ಮೂರು ವರ್ಷಗಳಲ್ಲಿ ಅಪ್ರಾಪ್ತ ವಯಸ್ಸಿನಲ್ಲಿ ತಾಯ್ತನದ ಭಾರ ಹೊರುವವರ ಸಂಖ್ಯೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಇಪ್ಪತ್ಮೂರು ಪ್ರಕರಣಗಳು ಬೆಳಕಿಗೆ ಬಂದಿದ್ದು, ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಮುಂದೆ ದಾಖಲಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹದಿಮೂರು ಹಾಗೂ ಉಡುಪಿಯಲ್ಲಿ ಹತ್ತು ಅಪ್ರಾಪ್ತರು ಗರ್ಭ ಧರಿಸಿದ್ದಾರೆ.
ಇವರಲ್ಲಿ ಬಹುತೇಕರು ಹದಿನಾಲ್ಕು ವರ್ಷ ಮೇಲ್ಪಟ್ಟವರು ಹಾಗೂ ಹದಿನೆಂಟು ವರ್ಷಕ್ಕಿಂತ ಚಿಕ್ಕ ವಯಸ್ಸಿನವರು. ಇದು ಬಯಲಾಗಿರುವ ಪ್ರಕರಣಗಳಾದರೆ, ಬೆಳಕಿಗೆ ಬಾರದ ಪ್ರಕರಣಗಳು ಎಷ್ಟಿವೆ ಎಂಬ ಪ್ರಶ್ನೆ ಕೂಡ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2015ರಿಂದ ಇಲ್ಲಿಯವರೆಗೆ ಹದಿಮೂರು ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಅತಿ ಹೆಚ್ಚು ಅಂದರೆ 15 ಪ್ರಕರಣ ಬೆಳಕಿಗೆ ಬಂದಿದೆ. ಈ ಮಧ್ಯೆ ತಂದೆ- ಚಿಕ್ಕಪ್ಪನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ ಎರಡು ಪ್ರಕರಣಗಳು ಈ ಪಟ್ಟಿಯಲ್ಲಿ ಸೇರಿವೆ.
ಉಭಯ ಜಿಲ್ಲೆಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಪೋಕ್ಸೋ ಕಾಯ್ದೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 191 ಪ್ರಕರಣಗಳು ದಾಖಲಾಗಿವೆ. ಉಡುಪಿಯಲ್ಲಿ 110 ಪ್ರಕರಣಗಳು ದಾಖಲಾಗಿವೆ. ಒಟ್ಟಾರೆ ಈ ಅಂಕಿ-ಅಂಶಗಳು ಆತಂಕ ಮೂಡಿಸುವಂತಿವೆ. ರಾಜ್ಯ ಸರಕಾರ ಈ ಬಗ್ಗೆ ಗಂಭೀರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications