ಅವಳಿ ದೈವಗಳ ಪವಾಡ:ಪಾಪೆಮಜಲು ಕೋಟಿ-ಚೆನ್ನಯ ಗರಡಿ ಬಳಿ ಚಿಮ್ಮಿದ ನೀರು!
ಮಂಗಳೂರು, ಜನವರಿ 17: ತುಳುನಾಡು ದೈವಗಳ ನೆಲೆಬೀಡು ಎಂದೇ ಪ್ರಖ್ಯಾತಿ ಪಡೆದ ಪ್ರದೇಶ. ಇಲ್ಲಿ ಒಂದಲ್ಲ ಒಂದು ವಿಸ್ಮಯಗಳು ಬೆಳಕಿಗೆ ಬರುತ್ತಲೇ ಇರುತ್ತವೆ. ಇವೆಲ್ಲ ತುಳುನಾಡನ್ನು ಕಾಯುವ ದೈವಗಳ ಶಕ್ತಿ ಎಂದೇ ಜನರ ನಂಬಿಕೆ. ಈಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಪೆಮಜಲು ಕೋಟಿ-ಚೆನ್ನಯ ಗರಡಿಯಲ್ಲಿ ವಿಸ್ಮಯವೊಂದು ಬೆಳಕಿಗೆ ಬಂದಿದೆ.
ಹೌದು, ತುಳುನಾಡಿನ ಐತಿಹಾಸಿಕ ವೀರ ಪುರುಷರಾದ ಕೋಟಿ-ಚೆನ್ನಯ ಗರಡಿ ಇರುವ ಸ್ಥಳದಲ್ಲಿ ನೀರಿನ ಕೊರತೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಗರಡಿಯ ಉಸ್ತುವಾರಿಗಳು ಕಳೆದ ಬಾರಿ ನಡೆದ ಭೂತಗಳ ನರ್ತನದ ಸಮಯದಲ್ಲಿ ಈ ದೈವಗಳ ಮುಂದೆ ನೀರಿನ ಸಮಸ್ಯೆಯ ಬಗ್ಗೆ ಅರುಹಿದ್ದರು.

ಆ ಸಂದರ್ಭದಲ್ಲಿ ಅವಳಿ ದೈವಗಳು ತಮ್ಮ ಆಯುಧವಾದ ಸುರ್ಯದಲ್ಲಿ ಗರಡಿಯ ಆವರಣದಲ್ಲಿದ್ದ ಸ್ಥಳದಲ್ಲಿ ಗುರುತು ಹಾಕಿ ಅದೇ ಸ್ಥಳದಲ್ಲಿ ಕೊಳವೆ ಬಾವಿ ಕೊರೆಯುವಂತೆ ಸೂಚಿಸಿದ್ದವು. ಅದರಂತೆ ಎರಡು ದಿನಗಳ ಹಿಂದೆ ದೈವಗಳು ಸೂಚಿಸಿದ ಸ್ಥಳದಲ್ಲೇ ಕೊಳವೆ ಬಾವಿ ಕೊರೆಯುವ ಕಾಮಗಾರಿ ಆರಂಭಿಸಲಾಗಿತ್ತು. ಇದೀಗ ಬಾವಿ ಕೊರೆಯುತ್ತಿದ್ದ ಸ್ಥಳದಲ್ಲಿ ಭೂಮಿಯಡಿಯಿಂದ ರಭಸದಿಂದ ನೀರು ಹೊರ ಚಿಮ್ಮಿದ್ದು, ಸ್ಥಳೀಯರ ವಿಸ್ಮಯಕ್ಕೆ ಕಾರಣವಾಗಿದೆ.

ಕೊಳವೆ ಬಾವಿ ಕೊರೆಯುವ ಸಂದರ್ಭ ವಿವಿಧ ವೈಜ್ಞಾನಿಕ ವಿಧಾನ ಅನುಸರಿಸಬೇಕಾದ ಈ ಕಾಲಘಟ್ಟದಲ್ಲಿ ದೈವಗಳು ಕೇವಲ ತನ್ನ ಆಯುಧಗಳಿಂದ ಸೂಚಿಸಿದ ಸ್ಥಳದಲ್ಲಿ ಅಗಾಧ ಪ್ರಮಾಣದ ನೀರು ಸಿಕ್ಕಿರುವುದು ದೈವದ ಇರುವಿಕೆಗೆ ಸಾಕ್ಷಿ ಎನ್ನುವ ಅಭಿಪ್ರಾಯಗಳು ಇದೀಗ ಹರಿದಾಡಲಾರಂಭಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications