ಮಂಗಳೂರು ಎಎಸ್ಐ ಐತಪ್ಪನ ಮೇಲೆ ಮಾರಣಾಂತಿಕ ಹಲ್ಲೆ
ಮಂಗಳೂರು, ಏಪ್ರಿಲ್ 05 : ಗಸ್ತಿನಲ್ಲಿದ್ದ ಎಎಸ್ಐ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬುಧವಾರ ಬೆಳಗಿನಜಾವ ನಗರದ ಲೇಡಿಹಿಲ್ ವೃತ್ತದ ಬಳಿ ನಡೆದಿದೆ.
ಉರ್ವ ಠಾಣೆಯ ಎಎಸ್ಐ ಐತಪ್ಪ ಅವರ ಮೇಲೆ ಬೈಕಲ್ಲಿ ಬಂದ ದುಷ್ಕರ್ಮಿಗಳು ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಬುಧವಾರ ಮುಂಜಾನೆ ಸುಮಾರು 3:30ಕ್ಕೆ ನಗರದ ಲೇಡಿಹಿಲ್ ಸರ್ಕಲ್ ಬಳಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಇಬ್ಬರು ದುಷ್ಕರ್ಮಿಗಳು ರಾಡ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಗೀಡಾದ ಐತಪ್ಪರ ತಲೆಯಿಂದ ರಕ್ತ ಸುರಿದಿದ್ದು, ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ಮುಂದುವರಿದಿದೆ.
ಪೊಲೀಸ್ ಆಯುಕ್ತ ಚಂದ್ರಶೇಖರ್, ಡಿಸಿಪಿ ಡಾ ಸಂಜೀವ್ ಪಾಟೀಲ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.












Click it and Unblock the Notifications