Get Updates
Get notified of breaking news, exclusive insights, and must-see stories!

ಬಂಟ್ವಾಳ: ಮಾಣಿಯಲ್ಲಿ ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಿಕೆಟ್‌ ಸ್ಟಂಪ್ಸ್‌ನಿಂದ ಹಲ್ಲೆ

ಮಂಗಳೂರು, ಮೇ, 24: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಿಕೆಟ್‌ ಸ್ಟಂಪ್ಸ್‌ನಿಂದ ದಾಳಿ ನಡೆಸಿದ್ದಾರೆ.

ಮಾಣಿಯಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ತಂಡ ಕ್ರಿಕೆಟ್‌ ಸ್ಟಂಪ್ಸ್‌ನಿಂದ ಹಲ್ಲೆ ನಡೆಸಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ವಿಧಾನಸಭೆ ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಇದು ಪ್ರತೀಕಾರ ಎನ್ನುವ ಶಂಕೆಯೂ ವ್ಯಕ್ತವಾಗಿದೆ. ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಎನ್ನುವವರು ತಲ್ವಾರ್ ದಾಳಿಗೆ ಒಳಗಾದವರಾಗಿದ್ದಾರೆ.

Miscreants Attack on Bajrang Dal and BJP workers at Bantwals Mani

ಹೀಗೆ ಕ್ರಿಕೆಟ್‌ ಸ್ಟಂಪ್ಸ್‌ನಿಂದ ದಾಳಿಗೆ ಒಳಗಾದ ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಣಿ ಜಂಕ್ಷನ್‌ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ಕ್ರಿಕೆಟ್‌ ಸ್ಟಂಪ್ಸ್‌ನಿಂದ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಒಮ್ನಿ ಕಾರಿನಲ್ಲಿ ಬಂದ ತಂಡವೊಂದು ಡಿಕ್ಕಿ ಹೊಡೆದಿದೆ. ನಂತರ ಕಾರಿನಿಂದ ಇಳಿದು ಬಂದ ದುಷ್ಕರ್ಮಿಗಳು ಕ್ರಿಕೆಟ್‌ ಸ್ಟಂಪ್ಸ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಹಲ್ಲೆಗೊಳಗಾದವರ ಕಾಲು ಮತ್ತು ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್, ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಲಿಂಗ ಮತ್ತಿತರರು ಹಲ್ಲೆ ನಡೆಸಿದ ಬಗ್ಗೆ ‌ದೂರು ದಾಖಲಿಸಿದ್ದಾರೆ. ಇನ್ನು ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರ ತಂಡ ತನಿಖೆ ಮುಂದುವರೆಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+