ಮಂಗಳೂರಿನಲ್ಲಿ ಮೋದಿ ಬ್ಯಾನರಿಗೆ ಕಿಡಿಗೇಡಿಗಳ ಬೆಂಕಿ
ಮಂಗಳೂರು, ಸೆ.20 : ಗುರುಪುರ ಪ್ರದೇಶದ ಬಸ್ ತಂಗುದಾಣದ ಬಳಿ "ಒಂದು ಭಾರತ ಶ್ರೇಷ್ಠ ಭಾರತ", "ಮೋದಿ ಲಾವೋ ದೇಶ್ ಬಚಾವೋ" ಎಂದು ಬರೆದಿರುವ ಬ್ಯಾನರ್ಗೆ ದುಷ್ಕರ್ಮಿಗಳ ತಂಡ ಬೆಂಕಿ ಹಚ್ಚಿ ಗಲಭೆ ಎಬ್ಬಿಸಲು ಹುನ್ನಾರ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಘಟನೆ ವಿವರ : ಭಾವಿ ಪ್ರಧಾನಿ ಎಂದೇ ಬಿಂಬಿತರಾಗುತ್ತಿರುವ ನರೇಂದ್ರ ಮೋದಿಯವರ ಭಾವಚಿತ್ರ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರವಿರುವ ಬ್ಯಾನರ್ಗಳನ್ನು ನಮೋ ಬ್ರಿಗೇಡ್ ಮಂಗಳೂರು ಶಾಖೆ ಗುರುಪುರ ಶಾಖೆ ಬಸ್ ತಂಗುದಾಣದ ಬಳಿ ನಿಲ್ಲಿಸಿತ್ತು. ಗುರುವಾರ ರಾತ್ರಿ ದುಷ್ಕರ್ಮಿಗಳ ತಂಡ ನಿಲ್ಲಿಸಲಾದ ಬ್ಯಾನರ್ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಎರಡು ದಿನಗಳ ಹಿಂದೆ ಮುಡಿಪು ಪ್ರದೇಶದಲ್ಲೂ ಇದೇ ರೀತಿಯ ನಡೆದಿದ್ದು, ಕೊಣಾಜೆ ಪೊಲೀಸರು 4 ದುಷ್ಕರ್ಮಿಗಳನ್ನು ಬಂಧಿಸಿದ್ಧರು. ಈ 4 ಮಂದಿ ದುಷ್ಕರ್ಮಿಗಳು ಮುಡಿಪು ಭಾಗದಲ್ಲಿ ಒಂದಲ್ಲ ಒಂದು ಅಪರಾಧಗಳಲ್ಲಿ ಗುರುತಿಸಿಕೊಳುತ್ತಿರುವ ನವಾಜ್ ಮಾತು ತಂಡ ಎಂದು ತಿಳಿದುಬಂದಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ.

ಮೋದಿ ಟೀ ಶರ್ಟ್ ಧರಿಸಿದ್ದ ವ್ಯಕ್ತಿಗೂ ಥಳಿಸಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ರಸ್ತೆ ತಡೆ ನಡೆಸಿ ಮೋದಿ ಚಿತ್ರವಿದ್ದ ಬ್ಯಾನರಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ಯತ್ನಿಸಿದಾಗ ಅವರನ್ನು ತಡೆಯಲು ಯತ್ನಿಸಿದ ಬಸ್ ಡ್ರೈವರ್ ಮತ್ತು ಕಂಡಕ್ಟರನ್ನು ಬಸ್ಸಿನಿಂದ ಹೊರಗೆಳೆದಿದೆ.
ಈ ಘಟನೆಗೆ ಸಂಬಂಧಿಸಿದಂತೆ ನವಾಜ್, ಇಕ್ಬಾಲ್, ಜಹೇದ್ ಮತ್ತು ಜಾಫರ್ ವಿರುದ್ಧ ಗುರುಪುರ ನಮೋ ಬ್ರಿಗೇಡ್ ಶಾಖೆಯ ಕಾರ್ಯಕರ್ತ ಜಗದೀಶ್ ಆಳ್ವಾರ ಅವರು ಬಜ್ಪೆ ಪೋಲಿಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ. ಕೃತ್ಯ ನಡೆಸಿದ ಸಂದರ್ಭದಲ್ಲಿ ಅವರು ಮದ್ಯ ಸೇವಿಸಿದ್ದರೆಂದು ಕೂಡ ಹೇಳಲಾಗಿದೆ.
ಈ ಘಟನೆಯಿಂದ ವಿಚಲಿತರಾಗದ ನಮೋ ಬ್ರಿಗೇಡ್ ತಂಡ ನಗರದಾದ್ಯಂತ ಮತ್ತಷ್ಟು ಮೋದಿ ಬ್ಯಾನರುಗಳನ್ನು ಕಟ್ಟಲು ನಿರ್ಧರಿಸಿದೆ. ಅಲ್ಲದೆ, ಕಿಡಿಗೇಡಿಗಳ ವಿರುದ್ಧ ತಿರುಗಿಬೀಳದಿರಲು ಬ್ರಿಗೇಡ್ ನಿರ್ಧರಿಸಿದೆ. ಇದಕ್ಕೂ ಮೊದಲು ಸಾವಿರಾರು ನಮೋ ಬ್ರಿಗೇಡ್ ಕಾರ್ಯಕರ್ತರು ಭಾರೀ ಪ್ರತಿಭಟನೆಗೆ ನಿರ್ಧರಿಸಿದ್ದರು. ಆದರೆ, ಬೃಹತ್ ಪ್ರತಿಭಟನೆ ನಡೆಸಿದರೆ ಕಿಡಿಗೇಡಿಗಳನ್ನು ಮತ್ತಷ್ಟು ಕೆಣಕಿದಂತಾಗುತ್ತದೆ ಎಂದು ಪ್ರತಿಭಟನೆಯನ್ನು ಕೈಬಿಡಲಾಯಿತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications