ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು : ಪ್ರಾರ್ಥನಾ ಮಂದಿರದ ಮೇಲೆ ಕಲ್ಲು ತೂರಾಟ

By ಐಸಾಕ್ ರಿಚರ್ಡ್, ಮಂಗಳೂರು
|
Google Oneindia Kannada News

ಮಂಗಳೂರು, ಫೆ. 25 : ಮಂಗಳೂರಿನಲ್ಲಿ ಕ್ರಿಶ್ಚಿಯನ್ನರ ಪ್ರಾರ್ಥನಾ ಮಂದಿರದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಉಳ್ಳಾಲ ಪೊಲೀಸರು ಮತ್ತು ಆರೋಗ್ಯ ಸಚಿವ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರಿನ ಕೋಟೆಕಾರು ಪ್ರದೇಶದಲ್ಲಿರುವ ಸಂತ ಜೋಸೆಫ್ ವಾಜ್ ಪ್ರಾರ್ಥನಾ ಮಂದಿರದ ಮೇಲೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಮಂದಿರದ ಕಿಟಕಿ ಗಾಜುಗಳು ಪುಡಿಯಾಗಿದ್ದು, ಮೇರಿ ಮಾತೆ ವಿಗ್ರಹಕ್ಕೆ ಹಾನಿ ಉಂಟಾಗಿದೆ.

St Joseph Vaz

ಉಳ್ಳಾಲ ಪೊಲೀಸರು ಮತ್ತು ಆರೋಗ್ಯ ಸಚಿವ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದು ನಿರ್ಜನ ಪ್ರದೇಶವಾಗಿದ್ದರಿಂದ ಕಲ್ಲು ತೂರಾಟ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. [ಅಲ್ಪಸಂಖ್ಯಾತರೇ ನಿಮ್ಮ ರಕ್ಷಣೆಗೆ ನಾವಿದ್ದೇವೆ : ಮೋದಿ ಅಭಯ]

mangaluru chruch

ವರದಿ ತಿರಸ್ಕಾರ : 2008ರಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚರ್ಚ್ ದಾಳಿ ನಡೆದಿತ್ತು. ಈ ದಾಳಿಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ನ್ಯಾ.ಬಿ.ಕೆ.ಸೋಮಶೇಖರ್ ಅವರ ಆಯೋಗದ ವರದಿಯನ್ನು ತಿರಸ್ಕಾರ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಪ್ರಕರಣದ ವಿಚಾರಣೆಯನ್ನು ಗೃಹ ಇಲಾಖೆಗೆ ವರ್ಗಾವಣೆ ಮಾಡಿ, ಮರು ತನಿಖೆ ನಡೆಸಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. [ಕೋಮು ಗಲಭೆಗಳಲ್ಲಿ ಕರ್ನಾಟಕ ದಕ್ಷಿಣದ ನಂ.1]

English summary
Karnataka : Miscreants pelted stones at St Joseph Vaz worship center at Kotekaru in Mangaluru on Tuesday night. The place of worship disfigured and statue of Mother Mary and Infant Jesus damaged. Karnataka minister U T Khader and Ullala police rush to the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X