ಉಳ್ಳಾಲದ ಉಳ್ಳಾಲಪೇಟೆಯ ಮಸೀದಿಗೆ ಕಲ್ಲು ತೂರಿದ ಕಿಡಿಗೇಡಿಗಳು

ಮಂಗಳೂರು, ನವೆಂಬರ್. 14 : ಜಿಲ್ಲೆಯಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವೆ ಒಂದಲ್ಲ ಒಂದು ಅಹಿತಕರ ಘಟನೆಗಳು ನಡೆಯುತ್ತಿವೆ. ಇದರಿಂದ ಮುಂಜಾಗೃತವಾಗಿ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಆದರೂ ಇತ್ತೀಚೆಗೆ ಈ ಭಾಗದಲ್ಲಿ ಚೂರಿ ಇರಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಅವರ ಮೇಲೆ ಇವರು, ಇವರ ಮೇಲೆ ಅವರು ಹೀಗೆ ಒಬ್ಬರಿಗೊಬ್ಬರು ತಮ್ಮ ಸೇಡಿ ಕಿಚ್ಚನ್ನು ಮುಂದುವರೆಸಿದ್ದಾರೆ. [ಮಂಗಳೂರಿನಲ್ಲಿ ಚೂರಿ ಇರಿತ, ಇಬ್ಬರಿಗೆ ಗಾಯ]

ಮತ್ತೆ ಸೋಮವಾರ ತಡರಾತ್ರಿ ಉಳ್ಳಾಲದ ಉಳ್ಳಾಲಪೇಟೆಯ ರಹ್ಮಾನಿಯ ಮಸೀದಿಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬೆಳಗ್ಗೆ ನಮಾಝ್ ಮಾಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದರಿಂದ ಕೂಡಲೇ ಆರೋಪಿಗಳುನ್ನು ಬಂಧಿಸಬೇಕೆಂದು ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸಿದೆ. [ಮಂಜನಾಡಿಯಲ್ಲಿ 10 ವರ್ಷದ ವಿದ್ಯಾರ್ಥಿಗೆ ಚೂರಿ ಇರಿತ]

Miscreants pelt stones at Ullalapete Rahmaniya mosque

ಮಸೀದಿಯೊಳಗೆ ಕಲ್ಲುಗಳಿದ್ದು, ಒಂದು ಗಾಜು ಪುಡಿಯಾಗಿದೆ. ಉಳ್ಳಾಲ ಪೊಲೀಸರು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾತ್ರಿ 12 ಗಂಟೆಯ ಸುಮಾರಿಗೆ ಮಸೀದಿಗೆ ಬಾಗಿಲು ಹಾಕಿ ತೆರಳಿದ ಬಳಿಕ ಈ ಘಟನೆ ನಡೆದಿದೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿರುವ ಉಳ್ಳಾಲ ಪೊಲೀಸರು ತಿಳಿಸಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಹಿಂದೂ ಮುಸ್ಲಿಂ ಮುಸುಕಿನ ಗುದ್ದಾಟಗಳು ಮುಂದುವರೆದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+