ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ ಎರಚಿದ ದುಷ್ಕರ್ಮಿಗಳು

|
Google Oneindia Kannada News

ಮಂಗಳೂರು, ಫೆಬ್ರವರಿ 3 : ಸರಕಾರವು ರಾಜ್ಯದಾದ್ಯಂತ ಆರಂಭಿಸಲು ಉದ್ದೇಶಿಸಿರುವ ಇಂದಿರಾ ಕ್ಯಾಂಟೀನ್ ಗೆ ವಿಘ್ನಗಳು ಎದುರಾಗುತ್ತಿವೆ. ಮಂಗಳೂರು ವ್ಯಾಪ್ತಿಯಲ್ಲಿ ಆರಂಭಿಸಲು ಉದ್ದೇಶಿಸಿದ್ದ ಇಂದಿರಾ ಕ್ಯಾಂಟೀನ್ ಮೇಲೆ ಕಿಡಿಗೇಡಿಗಳ ಕಣ್ಣು ಬಿದ್ದಿದೆ.

ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿರುವ ಇಂದಿರಾ ಕ್ಯಾಂಟೀನ್ ನ ಗೋಡೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ.

ಪುತ್ತೂರಿನಲ್ಲಿ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿ ಯಾರೆಂದೇ ಗೊತ್ತಿಲ್ಲಪುತ್ತೂರಿನಲ್ಲಿ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿ ಯಾರೆಂದೇ ಗೊತ್ತಿಲ್ಲ

ನಿರ್ಮಾಣ ಹಂತದ ಇಂದಿರಾ ಕ್ಯಾಂಟೀನ್ ನ ಕಟ್ಟಡದಲ್ಲಿ ಗಾಜಿನ ಮೇಲೆ ಅಳವಡಿಸಲಾಗಿದ್ದ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಭಾವಚಿತ್ರದ ಮೇಲೆ ದುಷ್ಕರ್ಮಿಗಳು ಮಸಿ ಎರಚಿದ್ದಾರೆ. ಸುರತ್ಕಲ್ ನಲ್ಲಿ ಸ್ಥಳೀಯ ಶಾಸಕ ಮೊಯಿದ್ದೀನ್ ಬಾವಾ ಅವರ ಮುತುವರ್ಜಿಯಲ್ಲಿ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿತ್ತು .

Miscreants smear black ink on portrait of Indira Gandhi at under construction Indira Canteen

ಈ ನಡುವೆ ಕ್ಯಾಂಟೀನ್ ಕಾಮಗಾರಿ ಮೇಲೆ ಕಿಡಿಗೇಡಿಗಳು ಕಣ್ಣು ಬಿದ್ದಿದ್ದು, ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ ಬಳಿದಿದ್ದಾರೆ. ಈ ಕುರಿತು ಸುರತ್ಕಲ್ ಠಾಣೆಗೆ ದೂರು ನೀಡಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ. ಶುಕ್ರವಾರ ತಡ ರಾತ್ರಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

English summary
Miscreants smear black ink on under construction Indira Canteen at Suratkal. Friday late night unidentified miscreants smeared on portrait of Indira Gandhi with black ink. Incident came to light in Saturday morning
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X