ಮಂಗಳೂರು : ಶಿಕಾರಿಗೆ ಹೋಗಿದ್ದ ಯುವಕರು ಶವವಾಗಿ ಪತ್ತೆ
ಮಂಗಳೂರು, ಮಾರ್ಚ್ 22 : ಬೇಟೆಗೆಂದು ತೆರಳಿ ಕಾಡಿನಲ್ಲಿ ನಾಪತ್ತೆಯಾಗಿದ್ದ ಗೆಳೆಯರಿಬ್ಬರ ಮೃತದೇಹ ಪತ್ತೆಯಾಗಿದೆ. ಕಾಡಿನಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ ಪಟ್ಟಿದ್ದಾರೆ.
ಮೂಡುಬಿದ್ರೆ ನಿವಾಸಿಗಳಾದ ಪ್ರವೀಣ್ ತೌರೋ (33) ಹಾಗೂ ಗ್ರೆಷನ್ (32) ಕರಿಂಜೆ ಕಾಡಿಗೆ ಸೋಮವಾರ ರಾತ್ರಿ ತೆರಳಿದ್ದರು. ಬೇಟೆಗೆ ತೆರಳಿದ್ದ ಯುವಕರು ಆ ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು.
ಕಾಡಿನಂಚಿನ ತೋಟಗಳಲ್ಲಿ ಕಾಡು ಪ್ರಾಣಿಗಳು ತೋಟ ಪ್ರವೇಶಿಸದಂತೆ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಪ್ರವೀಣ್ ತೌರೋ, ಗ್ರೆಷನ್ ಮೃತಪಟ್ಟಿದ್ದಾರೆ.

ಬೇಟೆಗೆ ತೆರಳುವ ಸಂದರ್ಭದಲ್ಲಿ ಬಳಸಿದ್ದ ಜೀಪ್ ಕಾಡಿನಂಚಿನಲ್ಲಿ ಪತ್ತೆಯಾಗಿತ್ತು. ಆದರೆ, ಕಾಡಿಗೆ ತೆರಳಿದ್ದ ಯುವಕು ಏನಾದರು? ಎಂಬ ಮಾಹಿತಿ ಕುಟುಂಬ ಸದಸ್ಯರಿಗೆ ಲಭ್ಯವಾಗಿರಲಿಲ್ಲ. ಇಬ್ಬರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು.
ಯುವಕರು ನಾಪತ್ತೆಯಾದ ಕುರಿತು ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಡಿನಲ್ಲಿ ನಾಮತ್ತೆಯಾಗಿರುವ ಯುವಕರಿಗಾಗಿ ಇಂದು ಮುಂಜಾನೆ ಮೂಡಬಿದ್ರೆ ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ಆರಂಭಿಸಿದ್ದರು.
ಸಂಜೆಯ ವೇಳೆಗೆ ಕಾಡಂಚಿನ ತೋಟದ ಪಕ್ಕ ಪ್ರವೀಣ್ ತೌರೋ ಹಾಗು ಗ್ರೆಷನ್ ಅವರ ಮೃತದೇಹ ಕರಟಿಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಪಟ್ಟಿರುವ ಪ್ರವೀಣ್ ತೌರೋ ಟೆಂಪೊ ಚಾಲಕನಾಗಿದ್ದ. ಮೂಡಬಿದ್ರೆಯಲ್ಲಿ ಸರ್ವಿಸ್ ಸ್ಟೇಷನ್ ಮಾಲಕನಾಗಿರುವ ಗ್ರೇಷನ್ ವಿವಾಹಿತರಾಗಿದ್ದು ಓರ್ವ ಪುತ್ರಿ ಇದ್ದಾಳೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications