ಮಂಗಳೂರು : ಶಿಕಾರಿಗೆ ಹೋಗಿದ್ದ ಯುವಕರು ಶವವಾಗಿ ಪತ್ತೆ
ಮಂಗಳೂರು, ಮಾರ್ಚ್ 22 : ಬೇಟೆಗೆಂದು ತೆರಳಿ ಕಾಡಿನಲ್ಲಿ ನಾಪತ್ತೆಯಾಗಿದ್ದ ಗೆಳೆಯರಿಬ್ಬರ ಮೃತದೇಹ ಪತ್ತೆಯಾಗಿದೆ. ಕಾಡಿನಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ ಪಟ್ಟಿದ್ದಾರೆ.
ಮೂಡುಬಿದ್ರೆ ನಿವಾಸಿಗಳಾದ ಪ್ರವೀಣ್ ತೌರೋ (33) ಹಾಗೂ ಗ್ರೆಷನ್ (32) ಕರಿಂಜೆ ಕಾಡಿಗೆ ಸೋಮವಾರ ರಾತ್ರಿ ತೆರಳಿದ್ದರು. ಬೇಟೆಗೆ ತೆರಳಿದ್ದ ಯುವಕರು ಆ ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು.
ಕಾಡಿನಂಚಿನ ತೋಟಗಳಲ್ಲಿ ಕಾಡು ಪ್ರಾಣಿಗಳು ತೋಟ ಪ್ರವೇಶಿಸದಂತೆ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಪ್ರವೀಣ್ ತೌರೋ, ಗ್ರೆಷನ್ ಮೃತಪಟ್ಟಿದ್ದಾರೆ.

ಬೇಟೆಗೆ ತೆರಳುವ ಸಂದರ್ಭದಲ್ಲಿ ಬಳಸಿದ್ದ ಜೀಪ್ ಕಾಡಿನಂಚಿನಲ್ಲಿ ಪತ್ತೆಯಾಗಿತ್ತು. ಆದರೆ, ಕಾಡಿಗೆ ತೆರಳಿದ್ದ ಯುವಕು ಏನಾದರು? ಎಂಬ ಮಾಹಿತಿ ಕುಟುಂಬ ಸದಸ್ಯರಿಗೆ ಲಭ್ಯವಾಗಿರಲಿಲ್ಲ. ಇಬ್ಬರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು.
ಯುವಕರು ನಾಪತ್ತೆಯಾದ ಕುರಿತು ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಡಿನಲ್ಲಿ ನಾಮತ್ತೆಯಾಗಿರುವ ಯುವಕರಿಗಾಗಿ ಇಂದು ಮುಂಜಾನೆ ಮೂಡಬಿದ್ರೆ ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ಆರಂಭಿಸಿದ್ದರು.
ಸಂಜೆಯ ವೇಳೆಗೆ ಕಾಡಂಚಿನ ತೋಟದ ಪಕ್ಕ ಪ್ರವೀಣ್ ತೌರೋ ಹಾಗು ಗ್ರೆಷನ್ ಅವರ ಮೃತದೇಹ ಕರಟಿಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಪಟ್ಟಿರುವ ಪ್ರವೀಣ್ ತೌರೋ ಟೆಂಪೊ ಚಾಲಕನಾಗಿದ್ದ. ಮೂಡಬಿದ್ರೆಯಲ್ಲಿ ಸರ್ವಿಸ್ ಸ್ಟೇಷನ್ ಮಾಲಕನಾಗಿರುವ ಗ್ರೇಷನ್ ವಿವಾಹಿತರಾಗಿದ್ದು ಓರ್ವ ಪುತ್ರಿ ಇದ್ದಾಳೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications