ಲೋಕಸಭಾ ಚುನಾವಣೆ :ದ.ಕ.ಕಾಂಗ್ರೆಸ್ ನಿಂದ ಮಿಥುನ್ ರೈಗೆ ಟಿಕೆಟ್ ?
ಮಂಗಳೂರು, ಜನವರಿ 14: ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ರಾಜಕೀಯ ಆರಂಭವಾಗಿದೆ. ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ನ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ.
ಈ ನಡುವೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈಗೆ ಟಿಕೆಟ್ ನೀಡುವಂತೆ ಯುವ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.
ನಿನ್ನೆ ಭಾನುವಾರ (ಜನವರಿ 13) ದಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಮಿಥುನ್ ರೈ ವಹಿಸಿದ್ದರು. ಸಭೆಯಲ್ಲಿ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ದುಡಿಯುತ್ತಿರುವ ಯುವಕರಿಗೆ ಸ್ಥಾನಮಾನ ನೀಡುವಂತೆ ಒತ್ತಾಯಿಸಲಾಯಿತು.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಿಥುನ್ ರೈ ಗೆ ಮುಂದಿನ ದಿನಗಳಲ್ಲಿ ಅವಕಾಶ ಕೊಡುವುದಾಗಿ ಭರವಸೆ ನೀಡಲಾಗಿತ್ತು. ಈ ಸಲವೂ ಅವಕಾಶ ವಂಚಿತರಾದರೆ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ದುಡಿಯುವ ಯುವಕರ ಕೊರತೆಯಾಗಬಹುದು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತಪಡಿಸಲಾಗಿದೆ.
ಅದಲ್ಲದೇ 'ಮನೆ ಮನೆಗೆ ಯುವ ಕಾಂಗ್ರೆಸ್' ಮತ್ತು ಜನವರಿ 30 ರಂದು ದೆಹಲಿಯಲ್ಲಿ ನಡೆಯುವ ಯುವಕ್ರಾಂತಿ ಯಾತ್ರೆಯನ್ನು ಯಶಸ್ವಿಗೊಳಿಸಲು ಬೇಕಾದ ಸಿದ್ಧತೆ ಹಾಗೂ ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವ ತಯಾರಿ ಕುರಿತು ಚರ್ಚಿಸಲಾಯಿತು.
ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಟಕೆಟ್ ಗಿಟ್ಟಿಸಿ ಹೊಸ ಇನ್ನಿಂಗ್ಸ್ ಆರಂಭಿಸಲು ಮಾಜಿ ಸಚಿವ ರಮಾನಾಥ್ ರೈ ತುದಿಗಾಲಲ್ಲಿ ನಿಂತಿದ್ದಾರೆ. ಇತ್ತೀಚೆಗೆ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಬಿ ಜನಾರ್ಧನ ಪೂಜಾರಿ ಟಿಕೆಟ್ ಗಾಗಿ ದೆಹಲಿ ಮಟ್ಟದಲ್ಲಿ ಪ್ರಯತ್ನಿಸುವ ಹೇಳಿಕೆ ನೀಡಿ ಎಲ್ಲರನ್ನೂ ಚಕಿತಗೊಳಿಸಿದ್ದರು.
ಅದಲ್ಲದೇ ಅಲ್ಪಸಂಖ್ಯಾತರ ಟ್ರಂಪ್ ಕಾರ್ಡ್ ಬಳಸಿ ಮಾಜಿ ಶಾಸಕ ಜೆ ಆರ್ ಲೋಬೊ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಲಾಭಿ ಆರಂಭಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications