ಬೀಫ್ ರಫ್ತು ಮಾಡೋ ಹೆಚ್ಚಿನ ಕಂಪನಿಗಳು ಬಿಜೆಪಿ ಸಂಸದರದ್ದು:ಮಿಥುನ್ ರೈ
ಮಂಗಳೂರು, ಅಕ್ಟೋಬರ್. 15: ದೇಶ ಬೀಫ್ ರಫ್ತಿನಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಇದು ಕೇಂದ್ರದ ಬಿಜೆಪಿ ಸರಕಾರ ಸಾಧನೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಟೀಕಿಸಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀಫ್ ರಫ್ತು ಮಾಡುವ ಹೆಚ್ಚಿನ ಕಂಪನಿಗಳು ಬಿಜೆಪಿ ಸಂಸದರದ್ದು. ಆದರೆ ಮಂಗಳೂರಿನಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದವರು ಕಸಾಯಿಖಾನೆ ವಿರುದ್ಧ ಪ್ರತಿಭಟನೆ ಮಾಡುತ್ತಾರೆ.
ಸಂಘ ಪರಿವಾರದ್ದು ಗೋ ಮಾತೆಯ ಮೇಲಿನ ನೈಜ ಕಾಳಜಿಯಾಗಿದ್ದರೆ ಕೇಂದ್ರ ಸರಕಾದ ವಿರುದ್ಧ ಪ್ರತಿಭಟಿಸಲಿ ಎಂದು ಸವಾಲು ಹಾಕಿದರು.

ಸಚಿವ ಯುಟಿ ಖಾದರ್ ಅವರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕಸಾಯಿಖಾನೆಗಳ ಅಭಿವೃದ್ಧಿಯ ಸಲಹೆ ನೀಡಿದ್ದು ಮಾತ್ರ. ಆದರೆ ಇದನ್ನೇ ನೆಪವಾಗಿಟ್ಟುಕೊಂಡು ರಾಜಕೀಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಖಾದರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಇದು ಸಂಘಪರಿವಾರದ ಮುಖಂಡರಿಗೆ ಶೋಭೆ ತರುವಂತದ್ದಲ್ಲ ಎಂದು ಕಿಡಿಕಾರಿದರು.
ಸ್ಮಾರ್ಟ್ ಸಿಟಿ ಯೋಜನೆಯಲ್ಲೇ ಕಸಾಯಿಖಾನೆಗಳ ಅಭಿವೃದ್ಧಿ ಪ್ರಸ್ತಾಪಿಸಲಾಗಿದೆ. ಬಿಜೆಪಿ ಸಂಸದರು, ಶಾಸಕರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕಸಾಯಿಖಾನೆ ಅಭಿವೃದ್ಧಿಯ ಪ್ರಸ್ತಾವನೆಯನ್ನು ಸೇರಿಸುವಾಗ ಪ್ರತಿಭಟನೆ ಮಾಡಬಹುದಿತ್ತು.

ಈಗಲೂ ಕೇಂದ್ರದಲ್ಲಿ ನಗರಾಭಿವೃದ್ಧಿ ಸಚಿವರ ಮೂಲಕ ಅದನ್ನು ಬದಲಾಯಿಸಲು ಸಾಧ್ಯವಿದೆ. ಅದನ್ನು ಬಿಟ್ಟು, ಕೇವಲ ರಾಜಕೀಯ ಉದ್ದೇಶದಿಂದ, ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಮಿಥುನ್ ರೈ ತಾಕೀತು ಮಾಡಿದರು.
-
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ









Click it and Unblock the Notifications