ಸಾಮರಸ್ಯಕ್ಕಾಗಿ ಶಾಸಕ ಮೊಯ್ದೀನ್ ಬಾವಾ 10 ದಿನಗಳ ಪಾದಯಾತ್ರೆ
ಮಂಗಳೂರು, ಮಾರ್ಚ್ 5: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಪಾದಯಾತ್ರೆ ಬಿರುಸಾಗಿದೆ. ಒಂದೆಡೆ ಬಿಜೆಪಿ ಬೆಂಗಳೂರು ಮತ್ತು ಕರಾವಳಿಯಲ್ಲಿ ಪಾದಯಾತ್ರೆ ನಡೆಸುತ್ತಿದ್ದರೆ ಇತ್ತ ಕಾಂಗ್ರೆಸ್ ನಾಯಕರು ಕೂಡ ಮನೆ ಮನೆ ಸುತ್ತಲು ಮುಂದಾಗಿದ್ದಾರೆ.
ಹೀಗೆ ಕಾಂಗ್ರೆಸ್ ಕಡೆಯಿಂದ ಪಾದಯಾತ್ರೆಗೆ ಹೊರಟಿರುವವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯ್ದೀನ್ ಬಾವಾ. ಶಾಸಕ ಬಾವಾರ ನಡೆ-ಸಾಮರಸ್ಯದ ಕಡೆ' ಹೆಸರಿನಲ್ಲಿ ಅವರು ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.
ಇದೇ ಬರುವ ಮಾರ್ಚ್ 7 ರಿಂದ 10 ದಿನಗಳ ಸೌಹಾರ್ದ ನಡಿಗೆಯನ್ನು ಅವರು ಆಯೋಜಿಸಿದ್ದಾರೆ. ತಮ್ಮ ವಿಧಾನಸಭಾ ಕ್ಷೇತ್ರದ 23 ವಾರ್ಡ್ ಹಾಗೂ 13 ಗ್ರಾಮ ಪಂಚಾಯಿತಿಗಳಲ್ಲಿ ಈ ಪಾದಯಾತ್ರೆ ನಡೆಯಲಿದೆ. ಬ್ಯಾಂಡ್, ವಾಲಗದೊಂದಿಗೆ ಭರ್ಜರಿಯಾಗಿ ನಡೆಯುವ ಈ ನಡಿಗೆಯುದ್ದಕ್ಕೂ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸೀರೆ ಹಂಚುವ ಕಾರ್ಯಕ್ರಮವನ್ನೂ ಮುಂದುವರಿಸಲು ಬಾವಾ ನಿರ್ಧರಿಸಿದ್ದಾರೆ. ಬಾವಾ ಅವರ ಪಾದಯಾತ್ರೆಗೆ ಮಾರ್ಚ್ 7 ರಂದು ಮುಂಜಾನೆ ಮಂಗಳೂರು ಹೊರವಲಯದ ಮುಕ್ಕ ಜಂಕ್ಷನ್ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಚಿತ್ರನಟ ಪ್ರಕಾಶ್ ರೈ ಕೂಡ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
16 ರಂದು ಸಂಜೆ ಕೈಕಂಬದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ವಿಷ್ಣುನಾಥನ್ ಭಾಗವಹಿಸಲಿದ್ದಾರೆ.
ನಡಿಗೆ ಸಂದರ್ಭದಲ್ಲಿ ಸಭೆ, ಮನೆ ಮನೆ ಭೇಟಿ ಸೇರಿದಂತೆ ಸಾಧನೆಯ ಚಿತ್ರಣವನ್ನು ಜನತೆಗೆ ತಿಳಿಸಲು ಶಾಸಕ ಬಾವಾ ನಿರ್ಧರಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಶಾಸಕ ಮೊಯ್ದೀನ್ ಬಾವಾ, "ನನ್ನ ಕ್ಷೇತ್ರದಲ್ಲಿ ಸಾಮರಸ್ಯವನ್ನು ಕಾಪಾಡುವ ಸಲುವಾಗಿ ಈ ನಡಿಗೆಯನ್ನು ಆಯೋಜಿಸಲಾಗಿದೆ. ಮಾ. 15ರಂದು ನನ್ನ ಹುಟ್ಟುವನ್ನು ಆಚರಿಸಲಾಗುತ್ತಿದೆ. ಅಂದು ಕ್ಷೇತ್ರದ ಮಹಿಳೆಯರಿಗೆ ಸೀರೆ, ಮಕ್ಕಳಿಗೆ ನನ್ನ ಚಿತ್ರ ಇರುವ ನೋಟ್ಸ್ ಪುಸ್ತಕ, ಕ್ಯಾಲೆಂಡರ್, ಸಾಧನೆಯ ಪುಸ್ತಕವನ್ನು ಹಂಚಲಾಗುವುದು," ಎಂದು ತಿಳಿಸಿದ್ದಾರೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications