ನಲವತ್ತು ವರ್ಷದ ನಂಟು; ಸಿದ್ಧಾರ್ಥ್ ಸಾವಿಗೆ ಕಣ್ಣೀರಾದ ಶಾಸಕ ರಾಜೇಗೌಡ
Recommended Video
ಮಂಗಳೂರು, ಜುಲೈ 31: ಮಂಗಳೂರು-ಉಳ್ಳಾಲ ರಸ್ತೆಯ ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದ ಉದ್ಯಮಿ ವಿ. ಜಿ ಸಿದ್ದಾರ್ಥ ಅವರ ಮೃತ ದೇಹ ಬುಧವಾರ ಬೆಳಗ್ಗೆ ನದಿಯ ಹಿನ್ನೀರು ಪ್ರದೇಶ ಹೊಯ್ಗೆ ಬಜಾರ್ ಎಂಬ ಪ್ರದೇಶದಲ್ಲಿ ಪತ್ತೆಯಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಸುಮಾರು ಒಂದು ಗಂಟೆಗಳ ಕಾಲ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ನಡೆಯಿತು. ಮೃತ ದೇಹ ದೊರೆತಾಗಿನಿಂದಲೂ ಸ್ಥಳದಲ್ಲೇ ಇದ್ದ ಶೃಂಗೇರಿ ಶಾಸಕ ರಾಜೇಗೌಡ ಅವರು ಆಂಬುಲೆನ್ಸ್ ಬರುತ್ತಿದ್ದಂತೆ ಶವಾಗಾರದ ಮುಂಭಾಗ, ಭಾವೋದ್ರೇಕಗೊಂಡು ಅಳಲು ಆರಂಭಿಸಿದರು. ವೆನ್ಲಾಕ್ ಆಸ್ಪತ್ರೆಯಿಂದ ಚಿಕ್ಕಮಗಳೂರಿಗೆ ಪಾರ್ಥಿವ ಶರೀರವನ್ನು ರವಾನಿಸುವ ಮುನ್ನ ದುಃಖ ತಡೆಯಲಾರದೆ ಕಣ್ಣೀರಾದರು.
ಸಿದ್ದಾರ್ಥ ಅವರೊಂದಿಗೆ ರಾಜೇಗೌಡ ಅವರದ್ದು ಸುದೀರ್ಘ 40 ವರ್ಷಗಳ ಒಡನಾಟ. ಸಿದ್ಧಾರ್ಥ್ ಅವರ ಹಿತೈಷಿ, ಸ್ನೇಹಿತರಾಗಿದ್ದ ರಾಜೇಗೌಡ ಅವರಿಗೆ ಸಿದ್ಧಾರ್ಥ್ ಅವರ ಸರಳ ಜೀವನದ ಬಗ್ಗೆ ತುಂಬು ಅಭಿಮಾನ. ಈ ಅಭಿಮಾನ, ಗೌರವ ಅವರಲ್ಲಿ ಕಣ್ಣೀರು ತರಿಸಿದೆ.

"ಆದಷ್ಟು ಬೇಗ ಅಂತಿಮ ದರ್ಶನ ಏರ್ಪಡಿಸಿ, ಅಂತ್ಯಕ್ರಿಯೆ ನಡೆಸಬೇಕಾಗಿದೆ. ಈಗಾಗಲೇ ಮೃತದೇಹ ಕೊಳೆತಿರುವ ಕಾರಣ ಹೆಚ್ಚು ಹೊತ್ತು ಇಡಬಾರದು" ಎಂದು ವೈದ್ಯರು ಸೂಚಿಸಿದ ಮೇರೆಗೆ ಚಿಕ್ಕಮಗಳೂರಿಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಿದ್ದು, ಚಿಕ್ಕಮಗಳೂರಿನ ಎಬಿಸಿ ಎಸ್ಟೇಟ್ ಮತ್ತು ಚೇತನಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಈ ವೇಳೆ ಸಾರ್ವಜನಿಕರು, ಅಭಿಮಾನಿಗಳು ಸಹಕರಿಸಬೇಕೆಂದು ರಾಜೇಗೌಡ ವಿನಂತಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications