ಮಂಗಳೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ತಬ್ಬಿಬ್ಬಾದ ಶಾಸಕ ಮಾಡಿದ್ದೇನು?
ಮಂಗಳೂರು, ಅಕ್ಟೋಬರ್ 10: ಕುದ್ರೋಳಿ ಕಸಾಯಿಖಾನೆ ವಿಚಾರದಲ್ಲಿ ಪತ್ರಕರ್ತರಿಂದ ತೂರಿ ಬಂದ ಪ್ರಶ್ನೆಗಳಿಗೆ ಉತ್ತರಿಸಲಾಗದೇ ತಬ್ಬಿಬ್ಬಾದ ಬಿಜೆಪಿ ಶಾಸಕ ಸಂಜೀವ ಮಠಂದೂರು ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿ, ಅರ್ಧದಲ್ಲೇ ಎದ್ದು ಹೊರನಡೆದ ಪ್ರಸಂಗ ಮಂಗಳೂರಿನಲ್ಲಿ ನಡೆದಿದೆ.
ಕುದ್ರೋಳಿ ಕಸಾಯಿಖಾನೆಯನ್ನು ಅಭಿವೃದ್ಧಿಗೊಳಿಸುವ ಸಚಿವ ಖಾದರ್ ಅವರ ಹೇಳಿಕೆ ವಿಚಾರದಲ್ಲಿ ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಜೀವ ಮಠಂದೂರು, ಮಂಗಳೂರು ಸ್ಮಾರ್ಟ್ಸಿಟಿ ಯೋಜನೆಯಡಿ ಕಸಾಯಿಖಾನೆ ಅಭಿವೃದ್ಧಿಗೆ 15 ಕೋಟಿ ರೂಪಾಯಿಯನ್ನು ಸಚಿವ ಖಾದರ್ ನೀಡಿದ್ದಾರೆ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸ್ವಚ್ಛತೆಗೆ ನೀಡಿದ ಹಣವನ್ನು ಖಾದರ್ ಈ ರೀತಿ ದುರುಪಯೋಗಪಡಿಸುವುದು ಸರಿಯಲ್ಲ.

ಖಾದರ್ ಅಲ್ಪಸಂಖ್ಯಾತರನ್ನು ಓಲೈಸಲು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಈ ಕಸಾಯಿಖಾನೆಯ ಅಭಿವೃದ್ಧಿ ಯೋಜನೆಯನ್ನು ಜಾರಿಯಾಗಲು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ತಿಳಿಸಿದರು.
ಈ ನಡುವೆ ಶಾಸಕ ಸಂಜೀವ ಮಠಂದೂರು ಅವರಿಗೆ ಪತ್ರಕರ್ತರು ಮರು ಪ್ರಶ್ನೆ ಹಾಕಿದ್ದಾರೆ. ಕಸಾಯಿಖಾನೆ ಅಭಿವೃದ್ಧಿ ನಗರದ ಸ್ವಚ್ಛತೆ ಬಗ್ಗೆ ಕಾಳಜಿಯಿಂದಾಗಿಯೇ ಅಲ್ಲವೇ? ಎಂದಾಗ ಶಾಸಕರು ಉತ್ತರಿಸಲಾಗದೇ ಚಡಪಡಿಸಿದ್ದಾರೆ.
ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಮಿಟಿಯಲ್ಲಿ ಬಿಜೆಪಿ ಸದಸ್ಯರೂ ಕೂಡ ಇದ್ದು, ಈ ಕಸಾಯಿಖಾನೆಯ ಅಭಿವೃದ್ಧಿ ಪ್ರಸ್ತಾವನೆಗೆ ಯಾರೂ ಏಕೆ ವಿರೋಧ ವ್ಯಕ್ತಪಡಿಸಿಲ್ಲ ಎಂದು ಪತ್ರಕರ್ತರು ಶಾಸಕರಿಗೆ ಮರು ಪ್ರಶ್ನೆ ಹಾಕಿದರು.
ಈ ಸಂದರ್ಭದಲ್ಲಿ ತಮ್ಮತ್ತ ತೂರಿ ಬಂದ ಮತ್ತಷ್ಟು ಪ್ರಶ್ನೆಗಳಿಂದಾಗಿ ಕೆಲಹೊತ್ತು ಗೊಂದಲಕ್ಕೀಡಾದ ಸಂಜೀವ ಮಠಂದೂರು, ಯಾವುದೇ ಪ್ರಶ್ನೆಗೂ ಸಮರ್ಪಕವಾಗಿ ಉತ್ತರಿಸದೇ, ಅರ್ಧದಲ್ಲೇ ಎದ್ದು ಹೊರನಡೆದಿದ್ದಾರೆ. ಇದರಿಂದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮತ್ತಿತರರು ಮುಜುಗರ ಎದುರಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications