ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ತಬ್ಬಿಬ್ಬಾದ ಶಾಸಕ ಮಾಡಿದ್ದೇನು?

|
Google Oneindia Kannada News

ಮಂಗಳೂರು, ಅಕ್ಟೋಬರ್ 10: ಕುದ್ರೋಳಿ ಕಸಾಯಿಖಾನೆ ವಿಚಾರದಲ್ಲಿ ಪತ್ರಕರ್ತರಿಂದ ತೂರಿ ಬಂದ ಪ್ರಶ್ನೆಗಳಿಗೆ ಉತ್ತರಿಸಲಾಗದೇ ತಬ್ಬಿಬ್ಬಾದ ಬಿಜೆಪಿ ಶಾಸಕ ಸಂಜೀವ ಮಠಂದೂರು ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿ, ಅರ್ಧದಲ್ಲೇ ಎದ್ದು ಹೊರನಡೆದ ಪ್ರಸಂಗ ಮಂಗಳೂರಿನಲ್ಲಿ ನಡೆದಿದೆ.

ಕುದ್ರೋಳಿ ಕಸಾಯಿಖಾನೆಯನ್ನು ಅಭಿವೃದ್ಧಿಗೊಳಿಸುವ ಸಚಿವ ಖಾದರ್ ಅವರ ಹೇಳಿಕೆ ವಿಚಾರದಲ್ಲಿ ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು.

ಬಿಜೆಪಿಯವರಿಗೆ ಅನುಭವ ಕೊರತೆ ಇಷ್ಟಿದೆ ಎಂಬುದು ಗೊತ್ತಿರಲಿಲ್ಲ: ಖಾದರ್ಬಿಜೆಪಿಯವರಿಗೆ ಅನುಭವ ಕೊರತೆ ಇಷ್ಟಿದೆ ಎಂಬುದು ಗೊತ್ತಿರಲಿಲ್ಲ: ಖಾದರ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಜೀವ ಮಠಂದೂರು, ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯಡಿ ಕಸಾಯಿಖಾನೆ ಅಭಿವೃದ್ಧಿಗೆ 15 ಕೋಟಿ ರೂಪಾಯಿಯನ್ನು ಸಚಿವ ಖಾದರ್ ನೀಡಿದ್ದಾರೆ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸ್ವಚ್ಛತೆಗೆ ನೀಡಿದ ಹಣವನ್ನು ಖಾದರ್ ಈ ರೀತಿ ದುರುಪಯೋಗಪಡಿಸುವುದು ಸರಿಯಲ್ಲ.

MLA Sanjeeva Matadooru walks away from press conference in Mangaluru

ಖಾದರ್ ಅಲ್ಪಸಂಖ್ಯಾತರನ್ನು ಓಲೈಸಲು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಈ ಕಸಾಯಿಖಾನೆಯ ಅಭಿವೃದ್ಧಿ ಯೋಜನೆಯನ್ನು ಜಾರಿಯಾಗಲು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ತಿಳಿಸಿದರು.

ಕುದ್ರೋಳಿಯಲ್ಲಿ ಅತ್ಯಾಧುನಿಕ ಕಸಾಯಿಖಾನೆ ನಿರ್ಮಾಣ: ಇದು ಸಾಧ್ಯನಾ?ಕುದ್ರೋಳಿಯಲ್ಲಿ ಅತ್ಯಾಧುನಿಕ ಕಸಾಯಿಖಾನೆ ನಿರ್ಮಾಣ: ಇದು ಸಾಧ್ಯನಾ?

ಈ ನಡುವೆ ಶಾಸಕ ಸಂಜೀವ ಮಠಂದೂರು ಅವರಿಗೆ ಪತ್ರಕರ್ತರು ಮರು ಪ್ರಶ್ನೆ ಹಾಕಿದ್ದಾರೆ. ಕಸಾಯಿಖಾನೆ ಅಭಿವೃದ್ಧಿ ನಗರದ ಸ್ವಚ್ಛತೆ ಬಗ್ಗೆ ಕಾಳಜಿಯಿಂದಾಗಿಯೇ ಅಲ್ಲವೇ? ಎಂದಾಗ ಶಾಸಕರು ಉತ್ತರಿಸಲಾಗದೇ ಚಡಪಡಿಸಿದ್ದಾರೆ.
ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಮಿಟಿಯಲ್ಲಿ ಬಿಜೆಪಿ ಸದಸ್ಯರೂ ಕೂಡ ಇದ್ದು, ಈ ಕಸಾಯಿಖಾನೆಯ ಅಭಿವೃದ್ಧಿ ಪ್ರಸ್ತಾವನೆಗೆ ಯಾರೂ ಏಕೆ ವಿರೋಧ ವ್ಯಕ್ತಪಡಿಸಿಲ್ಲ ಎಂದು ಪತ್ರಕರ್ತರು ಶಾಸಕರಿಗೆ ಮರು ಪ್ರಶ್ನೆ ಹಾಕಿದರು.

ಕಸಾಯಿಖಾನೆಗೆ 15 ಕೋಟಿ ರೂ.ನೀಡಿದ ಖಾದರ್: ಸ್ಪಷ್ಟನೆ ಕೇಳಿದ ಕಾರ್ಕಳ ಶಾಸಕ ಸುನಿಲ್ ಕುಮಾರ್ಕಸಾಯಿಖಾನೆಗೆ 15 ಕೋಟಿ ರೂ.ನೀಡಿದ ಖಾದರ್: ಸ್ಪಷ್ಟನೆ ಕೇಳಿದ ಕಾರ್ಕಳ ಶಾಸಕ ಸುನಿಲ್ ಕುಮಾರ್

ಈ ಸಂದರ್ಭದಲ್ಲಿ ತಮ್ಮತ್ತ ತೂರಿ ಬಂದ ಮತ್ತಷ್ಟು ಪ್ರಶ್ನೆಗಳಿಂದಾಗಿ ಕೆಲಹೊತ್ತು ಗೊಂದಲಕ್ಕೀಡಾದ ಸಂಜೀವ ಮಠಂದೂರು, ಯಾವುದೇ ಪ್ರಶ್ನೆಗೂ ಸಮರ್ಪಕವಾಗಿ ಉತ್ತರಿಸದೇ, ಅರ್ಧದಲ್ಲೇ ಎದ್ದು ಹೊರನಡೆದಿದ್ದಾರೆ. ಇದರಿಂದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮತ್ತಿತರರು ಮುಜುಗರ ಎದುರಿಸಿದರು.

English summary
Today Putturu MLA and BJP district president Sanjeeva Matandooru had invited media persons for press conference over controversial Kudroli slaughterhouse development. In between this MLA sanjeeva Mantandooru could not answer the questions from media persons and decided to walk away.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X