ದಕ್ಷಿಣ ಕನ್ನಡದ ಕೆಲವು ಗ್ರಾಮಗಳಲ್ಲಿ ಸಿಗಲಿದೆ ಉಚಿತ ವೈಫೈ ಸೇವೆ
ಮಂಗಳೂರು, ಸೆಪ್ಟೆಂಬರ್.18: ದೇಶದಲ್ಲಿ ಡಿಜಿಟಲ್ ಯುಗ ಆರಂಭವಾಗಿದೆ. ಎಲ್ಲವೂ ಇಂಟರ್ ನೆಟ್ ಆಧಾರಿತ ಸೇವೆಗಳಾಗಿ ಮಾರ್ಪಾಡಾಗುತ್ತಿವೆ. ವಿಮಾನ, ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಉಚಿತ ಸೇವೆ ನೀಡುತ್ತಿದ್ದು, ಈಗ ಗ್ರಾಮೀಣ ಭಾಗದಲ್ಲೂ ವೈಫೈ ಸೇವೆ ಆರಂಭವಾಗಿರುವುದು ನಿಮಗೆ ಗೊತ್ತಿರುವ ವಿಷಯ.
ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಗಳಲ್ಲಿ ಅದರಲ್ಲೂ ಪುಟ್ಟ ಬಸ್ ನಿಲ್ದಾಣಗಳಲ್ಲಿಯೂ ಉಚಿತ ವೈಫೈ ಸೇವೆ ಶೀಘ್ರವೇ ಆರಂಭವಾಗಲಿದೆ.
ಮಂಗಳೂರು ಹೊರವಲಯದ ಮುಲ್ಕಿ- ಮೂಡಬಿದ್ರೆ ವ್ಯಾಪ್ತಿಯ ಗ್ರಾಮೀಣ ಭಾಗದ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಸದ್ಯದಲ್ಲೇ ಬಸ್ ತಂಗುದಾಣಗಳಲ್ಲಿ ವೈಫೈ ಉಚಿತ ಸೇವೆ ಲಭ್ಯವಾಗಲಿದೆ.

ಮೂಲ್ಕಿ- ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ತಮ್ಮ ಶಾಸಕರ ಅನುದಾನದಲ್ಲಿ ಈ ಕೊಡುಗೆ ನೀಡಲು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಕನಸಿಗೆ ಕೊಡುಗೆ ನೀಡಲು ಮುಂದಾಗಿದ್ದಾರೆ.
ಈ ವೈಫೈ ಸೌಲಭ್ಯ ಈಗಾಗಲೇ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿದೆ. ಆದರೆ ಈಗ ಗ್ರಾಮೀಣ ಭಾಗದ ಬಸ್ ನಿಲ್ದಾಣಗಳಲ್ಲಿ ಈ ಸೇವೆ ಕಲ್ಪಿಸುವುದರಿಂದ ವಿದ್ಯಾರ್ಥಿಗಳಿಗೆ ಹಾಗೂ ಆನ್ ಲೈನ್ ಹಣಕಾಸು ವ್ಯವಹಾರಕ್ಕೆ ಹೆಚ್ಚು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

ಬಜ್ಪೆ ಪರಿಸರದ ವಿಶೇಷ ಆರ್ಥಿಕ ವಲಯದ ಕಾರ್ಮಿಕರು, ವಿಮಾನ ನಿಲ್ದಾಣದ ಕಾರ್ಮಿಕರು, ಅಧಿಕಾರಿಗಳಿಗೂ ಈ ಸೌಲಭ್ಯ ಹೆಚ್ಚು ಸಹಕಾರಿಯಾಗಲಿದೆ. ಅಷ್ಟೇ ಅಲ್ಲ, ರಾಷ್ಟ್ರೀಕೃತ ಬ್ಯಾಂಕ್ ಹಾಗೂ ವಿಲೇವಾರಿ ಸಂಸ್ಥೆಗಳು, ವ್ಯಾಪಾರಿಗಳ ಹಣಕಾಸಿನ ವ್ಯವಹಾರಕ್ಕೆ ಉಪಯೋಗವಾಗಲಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಜ್ಪೆ ಬಸ್ ನಿಲ್ದಾಣ, ಮೂಲ್ಕಿಯ ಬಸ್ ನಿಲ್ದಾಣ ಸೇರಿದಂತೆ ಮೂಡುಬಿದ್ರೆ ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿ ಈ ವೈಫೈ ಸೇವೆ ಲಭ್ಯವಾಗಲಿದೆ.
ಸುಮಾರು 10 ಲಕ್ಷ ರೂಪಾಯಿ ಶಾಸಕ ಅನುದಾನದಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು. ಜಿಲ್ಲಾಧಿಕಾರಿಗೆ ಅನುದಾನ ಬಿಡುಗಡೆ ಮನವಿ ಮಾಡಲಾಗಿದ್ದು, ಜನಸಾಮಾನ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದ ಪ್ರಯೋಜನವಾಗಲಿದೆ. ಗ್ರಾಮೀಣ ಬದುಕು ಕೂಡ ಡಿಜಿಟಲ್ ಆಗಲಿದೆ ಎಂದು ಉಮಾನಾಥ್ ಕೋಟ್ಯಾನ್ ಹರ್ಷವ್ಯಕ್ತಪಡಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications