ವಿದ್ಯುತ್ ಸಮಸ್ಯೆಗೆ ಉತ್ತರ ಕಂಡುಕೊಂಡ ಐವಾನ್ ಡಿಸೋಜಾ
ಮಂಗಳೂರು, ಅಕ್ಟೋಬರ್ 22 : ವಿದ್ಯುತ್ ಕೊರತೆ ಎದುರಾಗಿರುವ ಇಂದಿನ ದಿನದಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ತಮ್ಮ ಮನೆಗೆ ಸೌರಶಕ್ತಿ ಮೇಲ್ಛಾವಣಿಯನ್ನು ಅಳವಡಿಸಿದ್ದಾರೆ. ಪ್ರತಿದಿನ 47 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುವ ಶಕ್ತಿಯನ್ನು ಹೊಂದಿದೆ.
ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಶಾಸಕ ಮೊಯಿದೀನ್ ಬಾವಾ ಮುಂತಾದವರು ಬುಧವಾರ ಸೌರಶಕ್ತಿ ಮೇಲ್ಛಾವಣಿ ಘಟಕ ಅಳವಡಿಕೆಗೆ ಚಾಲನೆ ನೀಡಿದರು. ಸುಮಾರು 7.50 ಲಕ್ಷದಿಂದ 8 ಲಕ್ಷ ರೂಪಾಯಿ ತನಕ ವೆಚ್ಚ ಮಾಡಿ, ದಿನವೊಂದಕ್ಕೆ 47 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುವ ಘಟಕ ನಿರ್ಮಾಣ ಮಾಡಲಾಗಿದೆ.[ಸೋಲಾರ್ ಪಾರ್ಕ್ ಬಗ್ಗೆ ರೈತರೊಂದಿಗೆ ಮಾತುಕತೆ]

'ಈ ಸೌರಶಕ್ತಿ ಘಟಕದಿಂದ ತಿಂಗಳಿಗೆ ತನ್ನ ಮನೆಯ ವಿದ್ಯುತ್ ಬಿಲ್ ಪಾವತಿ ಮಾಡಿ ಸುಮಾರು 7 ಸಾವಿರ ರೂ ಲಾಭ ಗಳಿಸಬಹುದು ಎನ್ನುತ್ತಾರೆ ಐವನ್ ಡಿಸೋಜಾ ಅವರು. ಸರ್ಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆ ಜನರಿಗೆ ಸಹಾಯಧನ ನೀಡಿದರೆ ಜನರು ಮನೆಗಳಲ್ಲಿ ಸೌರಶಕ್ತಿ ಘಟಕಗಳನ್ನು ಅಳವಡಿಸಿಕೊಳ್ಳಬಹುದು' ಎಂದು ಅವರು ಹೇಳಿದರು. [ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸೌರಶಕ್ತಿ ಮೇಲ್ಛಾವಣಿ ಬಲ]
ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ ಮಾತನಾಡಿ 'ಇತ್ತೀಚಿಗೆ ರಾಜ್ಯ ವಿದ್ಯುತ್ ಕೊರತೆಯನ್ನು ಎದುರಿಸುತ್ತಿದೆ. ಬೇಡಿಕೆಯಷ್ಟು ವಿದ್ಯುತ್ ಅನ್ನು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಮಳೆಯ ಪ್ರಮಾಣ ಕಡಿಮೆಯಾಗಿದ್ದರಿಂದ ವಿದ್ಯುತ್ ಸಮಸ್ಯೆ ಎದುರಾಗಿದೆ. ಜನರು ಮನೆಗಳಲ್ಲಿ ಸೋಲಾರ್ ಫಲಕ ಆಳವಡಿಸಿಕೊಳ್ಳುವುದರಿಂದ. ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗಬಹುದು' ಎಂದರು.

-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications