ಬಡವರಿಗೆ ಶಾಲೆ, ಆಸ್ಪತ್ರೆ ಕಟ್ಟುವ ಕನಸು ಹೊಂದಿದ್ದ ವ್ಯಕ್ತಿ: ಎಂಎಲ್ ಸಿ ಪ್ರಾಣೇಶ್
ಮಂಗಳೂರು, ಜುಲೈ 31: ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ ಅವರ ಮೃತದೇಹ ಹೊಯಿಗ್ ಬಜಾರ್ ಎಂಬ ಪ್ರದೇಶದ ನದಿ ಭಾಗದಲ್ಲಿ ಪತ್ತೆಯಾಗಿದೆ. ಅವರು ಮರಳಿ ಬರಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ.
ಮಂಗಳೂರಿನ ವೆನ್ ಲಾಕ್ ಆಸ್ಪತ್ರೆ ಬಳಿಯೂ ಜನರು ಸಿದ್ಧಾರ್ಥ್ ಅವರ ಪಾರ್ಥಿವ ಶರೀರ ನೋಡಲು ಬರುತ್ತಿದ್ದಾರೆ. ಈ ನಡುವೆ, ಚಿಕ್ಕಮಗಳೂರಿನ ಎಂಎಲ್ ಸಿ ಪ್ರಾಣೇಶ್, ಸಿದ್ಧಾರ್ಥ್ ಅವರ ಕುರಿತು ನೆನಪುಗಳನ್ನು ಹಂಚಿಕೊಂಡಿದ್ದಾರೆ.
"ಸಿದ್ದಾರ್ಥ್ ಅವರು ಕಾಫಿ ಬೆಳೆಯುವ ಭೂಮಿಯ ಒತ್ತುವರಿ ಸಮಸ್ಯೆ ಬಂದಾಗ ಆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಕಾಫಿ ಬೆಳೆಗಾರರ ಪರವಾಗಿ ನಿಂತಿದ್ದರು. ಇಷ್ಟೇ ಅಲ್ಲ, ಅನೇಕ ಸಮಾಜ ಸೇವೆಗಳನ್ನು ಮಾಡಿದ್ದಾರೆ. ಹಳ್ಳಿಯ ಯುವಕರಿಗೆ ಪೇಟೆಯಲ್ಲಿ ಉದ್ಯೋಗ ನೀಡಿದರು. ಕಾಫಿ ಡೇ ಯಲ್ಲಿ ಕೆಲಸ ಮಾಡುವ ಹುಡುಗರಿಗೆ ಭಾಷಾ ಸಂವಹನಕ್ಕಾಗಿ ವಿಶೇಷ ಶಾಲೆ ತೆರೆದು ಉಚಿತ ಶಿಕ್ಷಣ ನೀಡಿದವರು. ಅವರು ಯುವಕರಿಗೆ ರೋಲ್ ಮಾಡೆಲ್ ಆಗಿದ್ದರು. ಈ ಒಂದು ದುರ್ಘಟನೆ ಆಘಾತ ತಂದಿದೆ" ಎಂದು ಸಿದ್ಧಾರ್ಥ್ ಅವರ ಕಾರ್ಯಗಳನ್ನು ಸ್ಮರಿಸಿದರು ಪ್ರಾಣೇಶ್.

"ಕಾಫಿ ಡೇ ಯಲ್ಲಿ ಕೆಲಸ ಮಾಡುವ ಯುವಕರಿಗೆ ಬದುಕು ಕಟ್ಟಿಕೊಟ್ಟಿದ್ದರು. ಈಗ ಅವರ ಬದುಕೇ ಹೀಗೆ ಅಂತ್ಯವಾಯಿತು. ಬಡವರಿಗಾಗಿ ಶಾಲೆ, ಆಸ್ಪತ್ರೆ ಸ್ಥಾಪಿಸಬೇಕೆಂಬ ಕನಸನ್ನು ಹೊಂದಿದ್ದರು. ಅವರು ಮತ್ತೆ ಹುಟ್ಟಿ ಬರಲಿ, ಯುವ ಜನತೆಗೆ ಮಾರ್ಗದರ್ಶನ ನೀಡಲಿ" ಎಂದು ಭಾವುಕರಾದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications