ಮೀನುಗಾರರ ಸುರಕ್ಷತೆಗೆ ಬರಲಿದೆ ಬೋಟ್ ಟ್ರ್ಯಾಕರ್ ಆ್ಯಪ್
ಮಂಗಳೂರು, ಆಗಸ್ಟ್ 27: ಭದ್ರತೆ ದೃಷ್ಟಿಯಿಂದ ಹಾಗೂ ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕುವ ಮೀನುಗಾರರ ರಕ್ಷಣೆಗೆ ಸಹಕಾರಿ ಯಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ ತಂತ್ರಜ್ಞಾನದ ಮೊರೆ ಹೋಗಿದೆ. ಇದಕ್ಕಾಗಿ ಆರಂಭಿಸಿದ್ದ ಬೋಟ್ ಟ್ರ್ಯಾಕರ್ ಆ್ಯಪ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.
ಪ್ರಥಮ ಹಂತದಲ್ಲಿ ಮಂಗಳೂರು ಕರಾವಳಿಯ ಐದು ಬೋಟ್ಗಳಲ್ಲಿ ಪೈಲಟ್ ಪ್ರಾಜೆಕ್ಟ್ ಜಾರಿಗೊಳಿಸಲು ಸಿದ್ಧತೆ ನಡೆಯುತ್ತಿದೆ. ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರ ಸುರಕ್ಷತೆಗೆ ಈ ಆ್ಯಪ್ ನೆರವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಬೋಟ್ಗಳೆಷ್ಟು? ಅದರಲ್ಲಿ ಇರುವ ಮೀನುಗಾರರು ಯಾರು ಮತ್ತು ಅವರ ಸುರಕ್ಷತೆ ಕುರಿತು ನಿಖರ ಮಾಹಿತಿಯನ್ನು ಜಿಲ್ಲಾಡಳಿತ ಪಡೆಯಲು ಅನುಕೂಲವಾಗುವಂತೆ ಹೊಸ ಆ್ಯಪ್ ಸಿದ್ಧಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರ ಪರಿಕಲ್ಪನೆಯ ಈ ಆ್ಯಪ್ ಅನ್ನು ಮೈಸೂರಿನ ವಿಝ್ಲೈಟ್ ಇನೊವೇಶನ್ ಸೆಂಟರ್ ರೂಪಿಸಿದೆ. ಪೈಲಟ್ ಪ್ರಾಜೆಕ್ಟ್ ಆಗಿ ಮುಂದಿನ ವಾರ ಮಂಗಳೂರಿನ ಕರಾವಳಿಯ ಐದು ಬೋಟ್ಗಳಲ್ಲಿ ಜಾರಿಗೊಳಿಸಲು ತಯಾರಿ ನಡೆದಿದೆ. ಮೊದಲ ಹಂತದಲ್ಲಿ ದಕ್ಷಿಣ ಕನ್ನಡದ ಕರಾವಳಿಯಲ್ಲಿ ಈ ಆ್ಯಪ್ ಬಳಸಲು ಉದ್ದೇಶಿಸಲಾಗಿದ್ದು, ಮುಂದಿನ ಹಂತದಲ್ಲಿ ಕರ್ನಾಟಕ ಕರಾವಳಿಯ ಇತರ ಜಿಲ್ಲೆಗಳಲ್ಲಿ ಕೂಡ ಉಪಯೋಗಿಸುವ ಕುರಿತು ಚರ್ಚೆ ನಡೆಯುತ್ತಿದೆ.

ಮುಂಬರುವ ದಿನಗಳಲ್ಲಿ ಹೊಸ ಆ್ಯಪ್ ಅನ್ನು ಎಲ್ಲ ಬೋಟ್ ಮಾಲೀಕರು ಡೌನ್ಲೋಡ್ ಮಾಡಿಟ್ಟುಕೊಳ್ಳಲಿದ್ದಾರೆ. ಬೋಟ್ ಪ್ರತೀ ಬಾರಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೊದಲು ಬೋಟ್ ನಲ್ಲಿರುವ ಮೀನುಗಾರರ ತಂಡದ ನಾಯಕ ಬೋಟ್ನಲ್ಲಿರುವ ಸದಸ್ಯರ ಗುಂಪು ಚಿತ್ರ ಅಥವಾ ವಿಡಿಯೋ ತೆಗೆದು ಪೂರಕ ಮಾಹಿತಿ ಜತೆ ಆ್ಯಪ್ನಲ್ಲಿ ಅಪ್ಲೋಡ್ ಮಾಡಬೇಕಿದೆ.

ಮೀನುಗಾರಿಕೆ ನಡೆಸಿ ವಾಪಸಾಗುವ ಸಂದರ್ಭದಲ್ಲಿ ಕೂಡ ಚಿತ್ರವನ್ನು ಅಪ್ಲೋಡ್ ಮಾಡಬೇಕಾಗಿದೆ. ಹೊಸ ಆ್ಯಪ್ ಜಿಪಿಎಸ್ ಆಧಾರದಲ್ಲಿ ಕಾರ್ಯನಿರ್ವಹಿಸಲಿದೆ. ಚಂಡಮಾರುತ ಸೇರಿದಂತೆ ಇತರ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಅಗತ್ಯ ಮುಂಜಾಗರೂಕತಾ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಈ ಆ್ಯಪ್ ನೆರವಾಗಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications